ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡ ದಾನಿಗಳು.

ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡ ದಾನಿಗಳು.

 

ತುಮಕೂರಿನ ಹಜರತ್ ಮದರ್ ಷಾ ಕಲ್ಯಾಣ ಮಂಟಪದಲ್ಲಿ ತುಮಕೂರಿನ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾ ಘಟಕದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

 

ರಕ್ತದಾನ ಶಿಬಿರದಲ್ಲಿ ಹಲವು ದಾನಿಗಳು ಪಾಲ್ಗೊಂಡು ರಕ್ತದಾನ ಮಾಡುವ ಮೂಲಕ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷವಾಗಿ ಆಚರಿಸುವ ಮೂಲಕ ಸಂಕಷ್ಟದಲ್ಲಿರುವ ಜನತೆಗೆ ನೆರವಾಗಿದ್ದಾರೆ.

 

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಸಾಧಿಕ್ ಅಹಮದ್ ಮಾತನಾಡಿ ರಕ್ತದಾನ ಒಂದು ಉದಾತ್ತ ಕಾರ್ಯ ಆದರೆ ಇಂದು ಹೆಚ್ಚಿನ ಸಂಖ್ಯೆಯ ರೋಗಿಗಳು ರಕ್ತದ ಕೊರತೆಯಿಂದ ಜೀವ ಕಳೆದುಕೊಳ್ಳುವ ಅನೇಕ ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ ಹಾಗಾಗಿ ಅಂತಹ ಸಂಕಷ್ಟದಲ್ಲಿರುವ ರೋಗಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ದೇಶಾದ್ಯಂತ ಬೃಹತ್ ರಕ್ತದಾನ ಶಿಬಿರ ಆಯೋಜನೆ ಮಾಡಿದ್ದು ಅದರಂತೆ ತುಮಕೂರಿನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು , ಇನ್ನು ದೇಶಾದ್ಯಂತ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆಯನ್ನು ನಾವು ವಿಶಿಷ್ಟವಾಗಿ ಆಚರಿಸುವ ಸಲುವಾಗಿ ರಕ್ತದಾನ ಶಿಬಿರವನ್ನು ಆಯೋಜಿಸುವ ಮೂಲಕ ಹೋರಾಟದಲ್ಲಿ ಮಡಿದ ಸ್ವತಂತ್ರ ಸೇನಾನಿಗಳು ಅವರ ತ್ಯಾಗ ಬಲಿದಾನಕ್ಕೆ ನಮ್ಮ ಅಳಿಲು ಸೇವೆ ಸಲ್ಲಿಸುವ ದೃಷ್ಟಿಯಿಂದ ರಕ್ತದಾನ ಶಿಬಿರದ ಮೂಲಕ ಸಂಕಷ್ಟದಲ್ಲಿರುವವರಿಗೆ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಮುಂದಾಗಿದ್ದಾರೆ ಎಂದು ಪಾಪುಲರ್ ಫ್ರಂಟ್ ಆಫ್ ಇಂಡಿಯಾ ದ ಸಾಧಿಕ್ ಅಹಮದ್ ತಿಳಿಸಿದರು.

 

 

ಇದೇ ಸಂದರ್ಭದಲ್ಲಿ ಮೆಹಬೂಬ್ ಪಾಷಾ ಪಾಪುಲರ್ ಫ್ರಂಟ್ ಆಫ್ ಇಂಡಿಯಾದ ಕನ್ವೀನರ್ ಚಾಂದ್ ಪಾಷ, ಸಫೀರ್, ಡಾಕ್ಟರ್ ಇಮ್ರಾನ್ ಇಮ್ತಿಯಾಜ್ ಅಬುಸರ್ ಸೇರಿದಂತೆ ಹಲವರು ಹಾಜರಿದ್ದರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version