ತುಮಕೂರು ವಿ.ಸ ಕ್ಷೇತ್ರಕ್ಕೆ ಗ್ರಾಂಡ್ ಎಂಟ್ರಿ ಕೊಟ್ಟ ಬೊಮ್ಮನಹಳ್ಳಿ ಬಾಬು (ಅಟಿಕಾ).

ತುಮಕೂರು ವಿ.ಸ ಕ್ಷೇತ್ರಕ್ಕೆ ಗ್ರಾಂಡ್ ಎಂಟ್ರಿ ಕೊಟ್ಟ ಬೊಮ್ಮನಹಳ್ಳಿ ಬಾಬು (ಅಟಿಕಾ).

 

 

ತುಮಕೂರು _ಮುಂಬರುವ ವಿಧಾನಸಭಾ ಚುನಾವಣೆಗೆ ತುಮಕೂರು ನಗರ ವಿಧಾನ ಸಭಾ ಕ್ಷೇತ್ರಕ್ಕೆ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸುವುದಾಗಿ ಬೊಮ್ಮನಹಳ್ಳಿ ಬಾಬು ತಿಳಿಸಿದ್ದಾರೆ.

 

 

 

ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವುದು ಖಚಿತ ಎಂದು ತಿಳಿಸಿದ ಅವರು ಈ ಬಗ್ಗೆ ಜೆಡಿಎಸ್ ಪಕ್ಷದ ಮುಖಂಡರಾದ ಹೆಚ್‍.ಡಿ ಕುಮಾರಸ್ವಾಮಿರವರು ಸ್ಪಷ್ಟ ಪಡಿಸಿದ್ದಾರೆ ಎಂದರು.

 

 

ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ಮುಖಂಡರಾದ ಹೆಚ್ ಡಿ ಕುಮಾರಸ್ವಾಮಿ ರವರು ಅಧಿಕೃತವಾಗಿ ತಮ್ಮ ಹೆಸರನ್ನ ಅಂತಿಮಗೊಳಿಸಿದ ನಂತರ ಕ್ಷೇತ್ರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ.

 

 

ತುಮಕೂರು ನಗರದಲ್ಲಿ 35 ವಾರ್ಡ್ಗಳಿದ್ದು ಇದಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ಪಡೆದಿದ್ದು ಶೀಘ್ರದಲ್ಲೇ ತಮ್ಮ ಕಾರ್ಯ ಚಟುವಟಿಕೆಯನ್ನು ಆರಂಭಿಸಲಾಗುವುದು ಎಂದಿದ್ದಾರೆ.

 

 

 

 

ಇನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಗೋವಿಂದರಾಜು ರವರು ಸಹ ಸ್ಪರ್ಧೆ ಮಾಡಿದ್ದು ಅವರು ಸಹ ಪಕ್ಷದಿಂದ ಆಕಾಂಕ್ಷಿಯಾಗಿದ್ದಾರೆ ಮತ್ತಷ್ಟು ಆಕಾಂಕ್ಷಿಗಳು ಸಹ ಇದ್ದಾರೆ ಎಂದರು. ಇದರಲ್ಲಿ ಯಾವುದೇ ಅಭ್ಯಂತ್ರವಿಲ್ಲ ಆದರೆ ಜೆಡಿಎಸ್ ಪಕ್ಷದ ಮುಖಂಡರಾದ ಹೆಚ್‍.ಡಿ ಕುಮಾರಸ್ವಾಮಿರವರು ತಮ್ಮ ಹೆಸರನ್ನ ಅಂತಿಮಗೊಳಿಸಿದ್ದು ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆ ಖಚಿತ ಎನ್ನುವ ಮೂಲಕ ಎಲ್ಲಾ ಆಕಾಂಕ್ಷಿಗಳಿಗೂ ಟಾಂಗ್ ನೀಡಿದ್ದಾರೆ.

 

 

 

 

ಮುಂದಿನ ದಿನದಲ್ಲಿ ತುಮಕೂರು ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮಾಡುತ್ತೇನೆ ಇದರ ಜೊತೆಯಲ್ಲಿ ಕಳೆದ ಹತ್ತು ವರ್ಷದಿಂದ ತುಮಕೂರು ನಗರದಲ್ಲಿ ತಮ್ಮ ಉದ್ಯಮ ದ ಕಾರ್ಯ ಚಟುವಟಿಕೆ ನಡೆಯುತ್ತಿದೆ ಎಂದರು.

 

 

 

ಇನ್ನು ಉದ್ಯಮಿಯಾಗಿರುವ ತನಗೆ ಹಣದ ಅವಶ್ಯಕತೆ ಇಲ್ಲ ಆದರೆ ತುಮಕೂರು ವಿಧಾನಸಭಾ ಕ್ಷೇತ್ರದ ಸಾರ್ವಜನಿಕರಿಗೆ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಅವರಿಗೆ ಉತ್ತಮ ಸೇವೆ ನೀಡುವುದು ನನ್ನ ಉದ್ದೇಶ ಎಂದಿದ್ದಾರೆ.

 

 

 

ಜನರ ನಾಡಿ ಮಿಡಿತ ಅರಿತು ಮುಂದಿನ ದಿನದಲ್ಲಿ ಕೆಲಸ ನಿರ್ವಹಿಸುವುದು ನನ್ನ ಮೊದಲ ಆದ್ಯತೆ ಇದರೊಂದಿಗೆ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ತಾನು ಬದ್ಧನಾಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

 

 

ವರದಿ_ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!