ಕೇಂದ್ರ ಗುಪ್ತಚರ ಇಲಾಖೆ ಸಿಬ್ಬಂದಿ ಆತ್ಮಹತ್ಯೆಗೆ ಶರಣು.

ಕೇಂದ್ರ ಗುಪ್ತಚರ ಇಲಾಖೆ ಸಿಬ್ಬಂದಿ ಆತ್ಮಹತ್ಯೆಗೆ ಶರಣು.

 

 

 

ತುಮಕೂರು _ ಕೇಂದ್ರ ಗುಪ್ತಚರ ಇಲಾಖೆಯಲ್ಲಿ (central intelligence department)  ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ.

 

 

 

 

 

 

ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಸಿಬ್ಬಂದಿಯನ್ನು ನಾಗಮಂಗಲ ಮೂಲದ ಕೃಷ್ಣ. ವಿ ಎಂದು ತಿಳಿದು ಬಂದಿದ್ದು ತುಮಕೂರಿನ ಶಿರಾ ಗೇಟಿನ ಕ್ವಾಟ್ರಸ್ ನಲ್ಲಿ ವಾಸವಿದ್ದು ಕುಟುಂಬಸ್ಥರು ಮನೆಯಿಂದ ಹೊರ ಹೋಗಿದ್ದ ಸಂದರ್ಭದಲ್ಲಿ ಒಂಟಿಯಾಗಿದ್ದ ಕೃಷ್ಣ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

 

 

 

 

ಇನ್ನು ಮನೆಯಲ್ಲಿ ನಡೆದ ಕ್ಷುಲ್ಲಕ ಕಾರಣಕ್ಕೆ ಕೋಪಗೊಂಡಿದ್ದ ಕೃಷ್ಣ ಆತ್ಮಹತ್ಯೆಗೆ ಶರಣಾಗಿದ್ದು ಕೆಲ ವರ್ಷಗಳಿಂದ ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.

 

 

 

 

 

ಮನೆಯಿಂದ ಹೊರ ಹೋಗಿದ್ದ ಕುಟುಂಬಸ್ಥರು ಮನೆಗೆ ಆಗಮಿಸಿದಾಗ ಘಟನೆ ಬೆಳಕಿಗೆ ಬಂದಿದ್ದು .

 

 

 

 

 

ಮೃತ ದೇಹವನ್ನು ತುಮಕೂರು ಜಿಲ್ಲಾ ಆಸ್ಪತ್ರೆ ಸಾಗಿಸಲಾಗಿದ್ದು ತುಮಕೂರು ನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

ಮೃತಪಟ್ಟ ಪೊಲೀಸ್ ಸಿಬ್ಬಂದಿ ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದು ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version