ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿದ ವಿಧಾನಪರಿಷತ್ ಸದಸ್ಯ – ಚಿದಾನಂದ ಎಂ ಗೌಡ.

 

 

 

ನಿನ್ನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ದೊಡ್ಡಗೂಳ ಗೊಲ್ಲರಹಟ್ಟಿಯ ಬಳಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಅದೇ ಗ್ರಾಮದ ಯುವಕ ಹತ್ಯೆಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ಆರೋಪಿಿಗೆ ಶೀಘ್ರ ಶಿಕ್ಷೆಯಾಗಬೇಕು ಹಾಗೂ ಯುವತಿಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿದ್ದಾರೆ.

 

ಶೈಕ್ಷಣಿಕ ಭವಿಷ್ಯ ರೂಪಿಸಿಕೊಳ್ಳಲು ಪೋಷಕರು ತಮ್ಮ ಹೆತ್ತಮಕ್ಕಳನ್ನು ಶಾಲಾ-ಕಾಲೇಜುಗಳಿಗೆ ಕಳುಹಿಸುವ ಧೈರ್ಯ ಮಾಡುತ್ತಿದ್ದು ಇಂತಹ ಸಂದರ್ಭದಲ್ಲಿ ಪ್ರೀತಿಸುವಂತೆ ಒತ್ತಾಯಿಸಿ ವಿದ್ಯಾರ್ಥಿನಿಯನ್ನು ಹತ್ಯೆಗೈದ ಘಟನೆ ನಡೆದಿದ್ದು ದುರದೃಷ್ಟಕರ . ಈ ಕೂಡಲೇ ಆತನನ್ನು ಬಂಧಿಸಿ ಶಿಕ್ಷೆ ನೀಡುವ ಕೆಲಸವಾಗಬೇಕು ಎಂದರು.

 

 

ಇಂತಹ ಘಟನೆಗಳಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೆಟ್ಟು ಬೀಳುವುದು ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಒಳ್ಳೆಯ ದಾರಿಯಲ್ಲಿ ಬೆಳೆಸಬೇಕಾಗಿದೆ. ಇಲ್ಲವಾದರೆ ಇಂತಹ ಘಟನೆಗಳಿಗೆ ಸಾಕ್ಷಿಯಾಗುತ್ತದೆ ಇನ್ನು ಮುಂದೆ ಎಲ್ಲೂ ಕೂಡ ಇತರ ಘಟನೆಗಳು ಮರುಕಳಿಸಬಾರದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!