ಲೋಕೇಶ್ ಗೌಡ ಪರ ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ ಗೌಡ ಮತಯಾಚನೆ.

 

 

ಕೊರಟಗೆರೆ_    ಭಾರತೀಯ ಜನತಾ ಪಾರ್ಟಿ ಕೊರಟಗೆರೆ ಮಂಡಲದ ಪುರವಾರ ಹೋಬಳಿಯ ಬಡಕನಹಳ್ಳಿಯಲ್ಲಿ ಆಯೋಜಿಸಿದ್ದ ವಿಧಾನಪರಿಷತ್ ಚುನಾವಣೆ ಸಭೆಯಲ್ಲಿ ಸನ್ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಮಾಧುಸ್ವಾಮಿ ರವರ ಅಧ್ಯಕ್ಷೆತೆಯಲ್ಲಿ  ವಿಧಾನ ಪರಿಷತ್ ಶಾಸಕರಾದ ಚಿದಾನಂದ ಗೌಡ ರವರು ಭಾಗಿಯಾಗಿ ಪಕ್ಷದ ಅಭ್ಯರ್ಥಿ ಎನ್. ಲೋಕೇಶ್ ಗೌಡ ರವರ ಪರ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ತು ಚುನಾವಣೆ ಬಿಜೆಪಿ ಅಭ್ಯರ್ಥಿ ಲೋಕೇಶ್ ಗೌಡ  ತುಮಕೂರು ನಗರ ಶಾಸಕರಾದ ಜ್ಯೋತಿ ಗಣೇಶ, ಹಿರಿಯರು ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ವೈ ಎಚ್ ಹುಚ್ಚಯ್ಯ ನವರು, ಕೊರಟಗೆರೆ ಮಂಡಲದ ಅಧ್ಯಕ್ಷರಾದ ಪವನ್ ಕುಮಾರ್ ರವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹೆಬ್ಬಾಕ ರವಿ ರವರು, ಮಾರುತಿ ರವರು, ಹೋಬಳಿಯ ಮುಖಂಡರಾದ ಕೃಷ್ಣಮೂರ್ತಿರವರು, ಪ್ರಧಾನ ಕಾರ್ಯದರ್ಶಿಯಾದ ಸುರೇಂದ್ರ ರೆಡ್ಡಿ ರವರು, ಹೋಬಳಿ ಅಧ್ಯಕ್ಷರಾದ ನಂಜುಂಡಾರಾಧ್ಯ ರವರು, ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಶ್ರೀನಿವಾಸ್ ರವರು ಹಾಗೂ ಬಿಜೆಪಿ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಪಕ್ಷಾತೀತವಾಗಿ ಸೇರಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು ಮತ್ತು ಉಪಾಧ್ಯಕ್ಷರುಗಳು ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!