ಮುಂದಿನ ಚುನಾವಣೆಯಲ್ಲು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ._ರೇಣುಕಾಚಾರ್ಯ

 

ಮುಂದಿನ ಚುನಾವಣೆಯಲ್ಲಿ ನಮ್ಮ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೊನ್ನಾಳಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಎಂ ಪಿ ರೇಣುಕಾಚಾರ್ಯ ಭವಿಷ್ಯ ನುಡಿದಿದ್ದಾರೆ.

 

ನಮ್ಮ ಬಿಜೆಪಿ ನೇತೃತ್ವದ ಸರ್ಕಾರ ಉತ್ತಮ ಆಡಳಿತ ಹಾಗೂ ಉತ್ತಮ ಕೆಲಸ ನಿರ್ವಹಿಸಿದ್ದು ರಾಜ್ಯದ ಜನತೆ ನಮ್ಮ ಬೆನ್ನೆಲುಬಿಗೆ ಇದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಜನಾದೇಶ ಮುಂದಿನ ಚುನಾವಣೆಯಲ್ಲಿ ಸಿಗುವುದಿಲ್ಲ ಎಂದು ಹೊನ್ನಾಳಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎಂ ಪಿ ರೇಣುಕಾಚಾರ್ಯ ಅವರು ತುಮಕೂರಿನಲ್ಲಿ ತಿಳಿಸಿದರು.

 

ರಾಜ್ಯ ಹಾಗೂ ದೇಶದಲ್ಲಿ ಕಾಂಗ್ರೆಸ್ಗೆ ಭವಿಷ್ಯವಿಲ್ಲ ಈಗ ಸಿಕ್ಕಿರುವ ಜನಾದೇಶವೇ ಮುಂದಿನ ಚುನಾವಣೆಯಲ್ಲಿ ಸಿಗುತ್ತದೆ 2023ರ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕೇವಲ 25 ರಿಂದ 30 ಸ್ಥಾನಗಳನ್ನು ಗೆಲ್ಲಬಹುದು ಎಂದು ಭವಿಷ್ಯ ನುಡಿದಿದ್ದಾರೆ.

 

ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿಗಳ ಹುದ್ದೆಗೆ ಈಗಿನಿಂದಲೇ ಕಿತ್ತಾಟ ಶುರುವಾಗಿದೆ ಪ್ರತಿದಿನ ಒಬ್ಬಬ್ಬ ಕಾಂಗ್ರೆಸ್ ಮುಖಂಡರು ಒಂದೊಂದು ಹೇಳಿಕೆ ನೀಡುವ ಮೂಲಕ ಪ್ರಚಾರ ತೆಗೆದುಕೊಳ್ಳುತ್ತಿದ್ದಾರೆ ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಸಾಮೂಹಿಕ ನಾಯಕತ್ವ ಇಲ್ಲ ಬಣ ರಾಜಕೀಯ ಗರಿಗೆದರಿದೆ ಎಂದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version