ಪಾದಯಾತ್ರೆ ನಿಲ್ಲಿಸಲು ಕಾಂಗ್ರೆಸ್ ಹೈಕಮಾಂಡ್ ಸೂಚನೆ.

ಪಾದಯಾತ್ರೆ ನಿಲ್ಲಿಸಲು ಕಾಂಗ್ರೆಸ್ ಹೈಕಮಾಂಡ್ ಸೂಚನೆ.

 

ಮೇಕೆದಾಟು ಪಾದಯಾತ್ರೆಯನ್ನು ಕೂಡಲೇ ನಿಲ್ಲಿಸಿ ಎಂದು ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ನಾಯಕರಿಗೆ ಸಂದೇಶ ರವಾನಿಸಿದೆ.

 

 

ಪಾದಯಾತ್ರೆಯಿಂದ ಸಾಕಷ್ಟು ಮುಜುಗರ ಆಗುತ್ತಿತ್ತು ಕೂಡಲೇ ಅದರಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಈಗ ಮಧ್ಯ ಪ್ರವೇಶಿಸಿದ್ದು ಮೇಕೆದಾಟು ಪಾದಯಾತ್ರೆಯನ್ನು ಕೂಡಲೇ ನಿಲ್ಲಿಸಿ ಎಂದು ಕಾಂಗ್ರೆಸ್ ನಾಯಕರಿಗೆ ತಾಕೀತು ಮಾಡಿದೆ.

 

 

ನೆನ್ನೆ ಮೇಕೆದಾಟು ಪಾದಯಾತ್ರೆಯ ಸಂಬಂಧ ಹೈಕೋರ್ಟ್ ಕೂಡ ಅಸಮಾಧಾನ ವ್ಯಕ್ತಪಡಿಸಿ ಪಾದಯಾತ್ರೆ ನಿಲ್ಲಿಸಿ ಎಂದು ಮನವಿ ಮಾಡಿದೆ. ಇದರಿಂದ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ಸಂದೇಶ ರವಾನೆಯಾಗಿದ್ದು ಕೂಡಲೇ ಮೇಕೆದಾಟು ಪಾದಯಾತ್ರೆ ನಿಲ್ಲಿಸಿ ಎಂದು ರಾಜ್ಯದ ಕಾಂಗ್ರೆಸ್ ನಾಯಕರಿಗೆ ಸಂದೇಶ ರವಾನಿಸಿದೆ.

 

 

ರಂದೀಪ್ ಸಿಂಘ್ ಸುರ್ಜೇವಾಲ ಮೂಲಕ ಮಾಹಿತಿ ರವಾನಿಸಿದೆ ಕಾಂಗ್ರೆಸ್ ಹೈಕಮಾಂಡ್. ಇನ್ನು ಪಾದಯಾತ್ರೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಪಾದಯಾತ್ರೆ ಮುಂದುವರಿಸಲು ಸಿದ್ಧತೆ ನಡೆಸಿದ್ದರು ಆದರೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ನಾಯಕರಿಗೆ ಪಾದಯಾತ್ರೆ ನಿಲ್ಲಿಸಲು ಸ್ಪಷ್ಟ ಸಂದೇಶ ರವಾನಿಸಿದೆ ಹಾಗಾಗಿ ಮುಂದಿನ ದಿನದಲ್ಲಿ ಯಾವ ರೀತಿಯ ಬೆಳವಣಿಗೆ ಆಗಲಿದೆ ಎಂದು ಕಾದು ನೋಡಬೇಕು.

 

 

ವರದಿ _ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!