ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಹೇಳಿಕೆಗೆ ಮಾಜಿ ಸಚಿವ ಸೊಗಡು ಶಿವಣ್ಣ ಕಿಡಿ.

ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಹೇಳಿಕೆಗೆ ಮಾಜಿ ಸಚಿವ ಸೊಗಡು ಶಿವಣ್ಣ ಕಿಡಿ.

 

ತುಮಕೂರು_ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೋಳಿ ನೀಡಿದ್ದ ಹಿಂದೂ ವಿರೋಧಿ ಹೇಳಿಕೆ ಸಂಬಂಧ ಮಾಜಿ ಸಚಿವ ಶಿವಣ್ಣ ರವರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

 

 

ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆ ಖಂಡನೀಯ ಹಿಂದುಗಳ ಮನಸ್ಸಿಗೆ ನೋವುಂಟು ಮಾಡುವ ಹೇಳಿಕೆಯನ್ನು ನೀಡಿರುವ ಸತೀಶ್ ಜಾರಕಿ ಹೊಳಿಯನ್ನ ಸರ್ಕಾರ ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದ ಅವರು ಹಿಂದೂಗಳು ಅವರು ನೀಡಿದ ಹೇಳಿಕೆಗೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದು ಆ ಮೂಲಕ ತಮ್ಮ ತಪ್ಪಿನ ಅರಿವಾಗಿದೆ ಇನ್ನು ಅವರ ಹೇಳಿಕೆಯಿಂದ ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದ್ದು ಕೂಡಲೇ ಸತೀಶ್ ಜಾರಕಿಹೊಳಿಯನ್ನ ಬಂಧಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

 

 

 

ಇನ್ನು ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ, ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಹೋಗಿ ಹಿಂದುಗಳ ಆಕ್ರೋಶಕ್ಕೆ ಗುರಿಯಾದ ಕಾರಣ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ ಆ ಮೂಲಕ ಹಿಂದುಗಳ ಒಗ್ಗಟ್ಟು ಏನು ಎಂಬುದರ ಅರಿವು ಸತೀಶ್ ಜಾರಕಿ ಹೋಳಿಗೆ ಗೊತ್ತಾಗಿದೆ ಎಂದು ಹೇಳಿದ್ದಾರೆ.

 

 

 

ಕಳಪೆ ಕಾಮಗಾರಿ ವಿರುದ್ಧ ಮಾಜಿ ಸಚಿವ ಸೊಗಡು ಶಿವಣ್ಣ ಗುಡುಗು.

 

 

ತುಮಕೂರು ನಗರದಲ್ಲಿ ವೈಜ್ಞಾನಿಕವಾಗಿ ಯಾವುದೇ ಕಾಮಗಾರಿಗಳು ನಡೆಯುತ್ತಿಲ್ಲ ಇನ್ನು ತುಮಕೂರು ನಗರದಲ್ಲಿ ನಡೆಯುತ್ತಿರುವ ಸಾಕಷ್ಟು ಕಾಮಗಾರಿಗಳು ಸಂಪೂರ್ಣ ಕಳಪೆ ಕಾಮಗಾರಿಗಳಗಿ ಸಾರ್ವಜನಿಕರು ಪರಿತಪಿಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

 

 

ಇತ್ತೀಚಿಗೆ ತುಮಕೂರು ನಗರದ ಹೊರವಲಯದಲ್ಲಿ ಕಾಮಗಾರಿ ನಿರ್ವಹಿಸುವ ವೇಳೆ ಯಾವುದೇ ಸೂಚನೆ ಫಲಕ ಅಳವಡಿಸದೆ ಇರುವುದರಿಂದ ವ್ಯಕ್ತಿ ಒಬ್ಬ ಮೃತಪಟ್ಟಿರುವುದು ಅಧಿಕಾರಿಗಳ ಬೀಜವಾಬ್ದಾರಿ ನಡೆಗೆ ಹಿಡಿದ ಕೈಕನ್ನಡಿ ಎಂದರು.

 

 

 

ತುಮಕೂರು ನಗರದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ 152 ಹೆಚ್ಚು ಕಾಮಗಾರಿಗಳು ನಡೆದಿದ್ದು ಒಂದು ಕಾಮಗಾರಿಯು ಸಹ ಸರಿ ಇಲ್ಲ ಹಾಗಾಗಿ ತುಮಕೂರು ನಗರದಲ್ಲಿ ನಡೆದಿರುವ ಕಾಮಗಾರಿಗಳ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡು ತನಿಖೆ ನಡೆಸಬೇಕು ಎಂದರು.

 

 

ವರದಿ _ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version