ಕಾಂಗ್ರೆಸ್ ಪಕ್ಷದ ವತಿಯಿಂದ ಜನಜಾಗೃತಿ ಅಭಿಯಾನ ನಡೆಯಲಿದೆ ಡಾ. ಜಿ. ಪರಮೇಶ್ವರ್.

ಕಾಂಗ್ರೆಸ್ ಪಕ್ಷದ ವತಿಯಿಂದ ಜನಜಾಗೃತಿ ಅಭಿಯಾನ ನಡೆಯಲಿದೆ ಡಾ. ಜಿ. ಪರಮೇಶ್ವರ್.

 

 

ಕಾಂಗ್ರೆಸ್ ಪಕ್ಷದ ಸಾಧನೆಗಳು ಹಾಗೂ ದೇಶಕ್ಕೆ ನೀಡಿರುವ ಕೊಡುಗೆಯನ್ನು ಜನತೆಗೆ ತಿಳಿಹೇಳುವ ಸಲುವಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ಜನಜಾಗೃತಿ ಅಭಿಯಾನ ಹಾಗೂ ಸದಸ್ಯತ್ವ ನೋಂದಣಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

 

ಭಾನುವಾರ ತುಮಕೂರು ಅಮಾನಿಕೆರೆಯ ಗಾಜಿನಮನೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಇನ್ನು ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕಾಂಗ್ರೆಸ್ ನ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ,ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯ್ಲಿ , ಕೆ.ಎಚ್ ಮುನಿಯಪ್ಪ ಸೇರಿದಂತೆ ಹಲವು ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಜನತೆಗೆ ತಿಳಿಸಲಾಗುವುದು ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷರಾದ ಡಾ ಜಿ ಪರಮೇಶ್ವರ್ ಅವರು ತಿಳಿಸಿದರು.

 

ಇನ್ನು ತುಮಕೂರಿನ ಗಾಜಿನ ಮನೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಬಿಜೆಪಿ ಪಕ್ಷದ ವಿರುದ್ಧ ಹರಿಹಾಯ್ದರು, ಇನ್ನು ಭಾರತೀಯ ಜನತಾ ಪಾರ್ಟಿ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಟೀಕೆ ಮಾಡುತ್ತಿದ್ದಾರೆ ಇದು ಸರಿಯಾದ ಕ್ರಮವಲ್ಲ ಕಾಂಗ್ರೆಸ್ ಪಕ್ಷ ದೇಶಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ನೀಡಿದೆ ಆದರೆ ಇಂತಹ ಕಾರ್ಯಕ್ರಮಗಳನ್ನು ಬಿಜೆಪಿ ಪಕ್ಷ ಟೀಕೆ ಮಾಡುತ್ತಿದೆ ಈ ಮೂಲಕ ಮಹಾತ್ಮ ಗಾಂಧಿ ಸೇರಿದಂತೆ ಹಲವು ನಾಯಕರ ಬಗ್ಗೆಯೂ ಸಹ ಸಾಕಷ್ಟು ಗೊಂದಲ ಸೃಷ್ಟಿ ಮಾಡುತ್ತಿದೆ ಎಂದು ಆರೋಪಿಸಿದರು.

 

 

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕರಾದ ರಫೀಕ್ ಅಹಮ್ಮದ್, ಶಫಿ ಅಹಮದ್, ಮಾಜಿ ಶಾಸಕ ಕೆ .ಎನ್ ರಾಜಣ್ಣ, ಕಾಂಗ್ರೆಸ್ ವಕ್ತಾರ ಮುರಳಿದರ ಹಾಲಪ್ಪ, ರೇವಣಸಿದ್ದಯ್ಯ ,ಮರಿ ಚೆನ್ನಮ್ಮ, ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ರಾಮಕೃಷ್ಣಪ್ಪ ಸೇರಿದಂತೆ ಹಲವು ನಾಯಕರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version