ಎರಡು ದಿನಗಳ ಕ್ರಿಕೆಟ್ ಟೂರ್ನಮೆಂಟ್ ಅನ್ನು ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷರು ಮತ್ತು ಬಿ.ಕೆ.ಎಸ್.ಪ್ರತಿಷ್ಠಾನದ ಅಧ್ಯಕ್ಷರಾದ ಬಿ.ಕೆ.ಶಿವಪ್ಪ ಉದ್ಘಾಟಿಸಿದರು

 

ದೇವನಹಳ್ಳಿ ತಾಲ್ಲೂಕು ವಿಜಯಪುರ ಹೋಬಳಿ ಮಂಡಿಬೆಲೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೆಜ್ಜೆಕುಪ್ಪೆ ಗ್ರಾಮದಲ್ಲಿ ವಸಿಷ್ಠ ಸಿಂಹ ಬಾಯ್ಸ್ ತಂಡದ ಯುವಕರು ಬಹಳ ಶ್ರದ್ಧೆಯಿಂದ ತುಂಬಾ ಚೆನ್ನಾಗಿ ಮತ್ತು ಅಚ್ಚುಕಟ್ಟಾಗಿ ಏರ್ಪಡಿಸಿದ್ದ ಎರಡು ದಿನಗಳ ಕ್ರಿಕೆಟ್ ಟೂರ್ನಮೆಂಟ್ ಅನ್ನು ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷರು ಮತ್ತು ಬಿ.ಕೆ.ಎಸ್.ಪ್ರತಿಷ್ಠಾನದ ಅಧ್ಯಕ್ಷರಾದ ಬಿ.ಕೆ.ಶಿವಪ್ಪ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

 

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯ್ತಿ ಸದಸ್ಯರಾದ ದಿನ್ನೂರು ವೆಂಕಟೇಶ್, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯರು ಹಾಲಿ ಪಿ.ಎಲ್.ಡಿ.ಬ್ಯಾಂಕ್ ನಿರ್ದೇಶಕರಾದ ಧರ್ಮಪುರ ಬಸವರಾಜು, ಮಂಡಿಬೆಲೆ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯರಾದ ಕೃಷ್ಣಪ್ಪ, ಚನ್ನರಾಯಪಟ್ಟಣ ಗ್ರಾಮ ಪಂಚಾಯ್ತಿ ಸದಸ್ಯರಾದ ನಾರಾಯಣಸ್ವಾಮಿ, ರಮೇಶ್ ಹಾಗೂ ವಸಿಷ್ಠ ಸಿಂಹ ಬಾಯ್ಸ್ ತಂಡದ ಎಲ್ಲಾ ಯುವಕರು, ಊರಿನ ಮುಖಂಡರು ಮತ್ತು ವಿವಿಧ ಕಡೆಗಳಿಂದ ಆಗಮಿಸಿದ್ದ ಕ್ರಿಕೆಟ್ ತಂಡದ ಸದಸ್ಯರುಗಳು ಹಾಜರಿದ್ದರು.

 

ಯುವಕರ ತಂಡ ನಡೆಸುತ್ತಿರುವ ಎರಡು ದಿನಗಳ ಕ್ರಿಕೆಟ್ ಟೂರ್ನಮೆಂಟ್ ಯಶಸ್ವಿಯಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

ಎಲ್ಲರಿಗೂ ಶುಭವಾಗಲಿ…

 

ಗುರುಮೂರ್ತಿ ಬೂದಿಗೆರೆ

8861100990

Leave a Reply

Your email address will not be published. Required fields are marked *

You cannot copy content of this page

error: Content is protected !!