ಡಿ. ಸಿ ಕಚೇರಿ ಮುತ್ತಿಗೆ ಯತ್ನ ಎಂ.ಎಲ್ ಸಿ ರಾಜೇಂದ್ರ ಹಾಗೂ ಯುವ ಕಾಂಗ್ರೆಸ್ ನಾಯಕರ ಬಂಧನ ಬಿಡುಗಡೆ.

ಡಿ. ಸಿ ಕಚೇರಿ ಮುತ್ತಿಗೆ ಯತ್ನ ಎಂ.ಎಲ್ ಸಿ ರಾಜೇಂದ್ರ ಹಾಗೂ ಯುವ ಕಾಂಗ್ರೆಸ್ ನಾಯಕರ ಬಂಧನ ಬಿಡುಗಡೆ.

 

 

 

ತುಮಕೂರು_ಬಿಜೆಪಿ ಸರ್ಕಾರದ ವಿರುದ್ಧ ಬ್ರಷ್ಟಾಚಾರದ ಹಾಗೂ ಹಗರಣಗಳ ಸರಮಾಲೆ ಇಂದ ಜನರು ಹೈರಾಣಾಗಿದ್ದಾರೆ ಎಂದು ಪಕ್ಷದ ವತಿಯಿಂದ ಇಂದು ತುಮಕೂರಿನಲ್ಲಿ ಜನ ಆಕ್ರೋಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

 

 

 

ಕಾರ್ಯಕ್ರಮದ ನಂತರ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರ ನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ .

 

ಡಿ.ಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಹಿನ್ನೆಲೆಯಲ್ಲಿ ಎಂ.ಎಲ್ ಸಿ ರಾಜೇಂದ್ರ, ಅವರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರು ಶಶಿ ಹುಲಿಕುಂಟೆ, ಮೋಹನ್, ರಾಜೇಶ್ ದೊಡ್ಮನೆ ಸೇರಿದಂತೆ ಹಲವು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

 

 

ಇನ್ನು ಸುಮಾರು ಮುನ್ನೂರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಇದೇ ಸಂದರ್ಭದಲ್ಲಿ ಪೊಲೀಸ್ ಸರ್ಪಗಾವಲು ಹಾಕಿದ್ದ ಪೊಲೀಸ್ ಇಲಾಖೆ ಕಚೇರಿಗೆ ಮುನ್ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದರು ಇದೆ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು .

 

ಇದೇ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರ ಹಾಗೂ ಪೊಲೀಸರ ನಡುವೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

 

 

ಇದೇ ವೇಳೆ ಪ್ರತಿಕ್ರಿಯಿಸಿರುವ ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಶಶಿ ಹುಲಿಕುಂಟೆ ರವರು ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯ ಬ್ರಷ್ಟ ಸರ್ಕಾರದ ವಿರುದ್ಧ ಜನ ಆಕ್ರೋಶ ಕಾರ್ಯಕ್ರಮ ವನ್ನು ನಾಯಕರಾದ ಶ್ರೀನಿವಾಸ್ ಹಾಗೂ ಎಂಎಲ್ಸಿ ರಾಜೇಂದ್ರ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ನಾವು ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಹ ನೀಡಲು ಅವಕಾಶ ನೀಡದೆ ನಮ್ಮನ್ನ ಬಂಧಿಸಿದ್ದಾರೆ ಈ ಮೂಲಕ ಪೊಲೀಸರು ಸರ್ಕಾರದ ಕಪಿಮುಷ್ಟಿಯಲ್ಲಿ ಇದ್ದಾರೆ ಎನ್ನುವುದನ್ನು ನಮ್ಮನ್ನು ಬಂಧನ ಮಾಡುವ ಮೂಲಕ ಪೊಲೀಸರು ತೋರಿಸಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

 

ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನ ಸುಮಾರು ಇಪ್ಪತ್ತಕ್ಕೂ ಹೆಚ್ಚು ನಾಯಕರನ್ನು ಬಂಧಿಸಿ ನಂತರ ಪೊಲೀಸರು ಬಿಡುಗಡೆಗೊಳಿಸಿದ್ದಾರೆ.

 

ವರದಿ – ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!