ತಂದೆ-ತಾಯಿ ಆರೋಗ್ಯವಾಗಿದ್ದು ಗಾಬರಿಯಾಗುವ ಅವಶ್ಯಕತೆ ಇಲ್ಲ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ

 

 

 

 

ತಂದೆ-ತಾಯಿ ಆರೋಗ್ಯವಾಗಿದ್ದು ಭೇಟಿಗೆ ಯಾರು ಬರಬಾರದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಜೆಡಿಎಸ್ ಪಕ್ಷದ ವರಿಷ್ಠರು ಹಾಗೂ ಮಾಜಿ ಪ್ರಧಾನಿಗಳಾದ ಹೆಚ್ ಡಿ ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ರವರಿಗೆ ಕೋವಿದ ಪಾಸಿಟಿವ್ ಬಂದಿದ್ದು ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಅಲ್ಲಿ ತೀವ್ರ ಆತಂಕಕ್ಕೆ ಎಡೆಮಾಡಿದೆ ಆದಕಾರಣ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತನಾಡಿ ತಂದೆ-ತಾಯಿ ಕ್ಷೇಮವಾಗಿದ್ದಾರೆ ಯಾರೂ ಆತಂಕಪಡುವ ಅಗತ್ಯವಿಲ್ಲ ಅವರನ್ನು ನುರಿತ ವೈದ್ಯರ ತಂಡ ಒಳ್ಳೆಯ ಚಿಕಿತ್ಸೆ ನೀಡುವ ಮೂಲಕ ಅವರ ಆರೋಗ್ಯ ದ ಮೇಲೆ ತೀವ್ರ ನಿಗಾ ವಹಿಸಿದ್ದು ಯಾರು ಕೂಡ ಗಾಬರಿಯಾಗುವ ಅಗತ್ಯವಿಲ್ಲ ಹಾಗೂ ಆಸ್ಪತ್ರೆಗೆ ಬಂದು ಅವರನ್ನು ನೋಡುವುದು ಈ ಸಮಯದಲ್ಲಿ ಸೂಕ್ತವಲ್ಲ ಆದ ಕಾರಣ ತಾವು ಕೂಡ ಜಾಗೃತರಾಗಿರಬೇಕು ಆದಕಾರಣ ತಾವು ಕೂಡ ಕೋವಿಡ್ ನಿಯಮಗಳನ್ನು ಪಾಲಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version