ಪರಮೇಶ್ವರ್ ಅಭಿಮಾನಿ ಸಂಘದಿಂದ ಡಾ ಜಿ ಪರಮೇಶ್ವರ್ ಹುಟ್ಟುಹಬ್ಬ ಆಚರಣೆ.

ಪರಮೇಶ್ವರ್ ಅಭಿಮಾನಿ ಸಂಘದಿಂದ ಡಾ ಜಿ ಪರಮೇಶ್ವರ್ ಹುಟ್ಟುಹಬ್ಬ ಆಚರಣೆ.

ಕರ್ನಾಟಕದ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಕೊರಟಗೆರೆ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾಕ್ಟರ್ ಜಿ ಪರಮೇಶ್ವರ್ ಅವರ 70ನೇ ವರ್ಷದ ಹುಟ್ಟುಹಬ್ಬವನ್ನು ಪರಮೇಶ್ವರ್ ಅಭಿಮಾನಿ ಸಂಘದಿಂದ ತುಮಕೂರಿನ ಮೈದಾಳದ ಶಿವ ಶೈಕ್ಷಣಿಕ ಆಶ್ರಮದಲ್ಲಿ ಆಚರಿಸಲಾಯಿತು.

 

ಇನ್ನು ಕಾರ್ಯಕ್ರಮದಲ್ಲಿ ಆಶ್ರಮ ಶಾಲೆಯಲ್ಲಿ ಕಲಿಯುತ್ತಿರುವ ಬಡಮಕ್ಕಳಿಗೆ ಸಿಹಿ ಹಂಚಿ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸುವ ಮೂಲಕ ಸರಳವಾಗಿ ಅಭಿಮಾನಿಗಳ ಸಂಘದಿಂದ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ವಿದ್ಯಾವಾಹಿನಿ ಸಂಸ್ಥೆಯ ಮುಖ್ಯಸ್ಥರಾದ ಕೆ.ಬಿ ಜಯಣ್ಣರವರು ಮಾತನಾಡಿ ಜಿಲ್ಲೆ ಕಂಡ ಉತ್ತಮ ರಾಜಕಾರಣಿಗಳಲ್ಲಿ ಡಾಕ್ಟರ್ ಜಿ ಪರಮೇಶ್ವರ್ ರವರು ಪ್ರಥಮ, ಅವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಅನನ್ಯವಾದದ್ದು ಎಂದರು.

 

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ ರವರು ಮಾತನಾಡಿ ರಾಜ್ಯ ಹಾಗೂ ದೇಶದಲ್ಲಿನ ಉತ್ತಮ ರಾಜಕಾರಣಿಗಳಲ್ಲಿ ಡಾಕ್ಟರ್ ಜಿ ಪರಮೇಶ್ವರ್ ಕೂಡಒಬ್ಬರು ಅಂತಹ ಸಜ್ಜನ ರಾಜಕಾರಣಿ ಮುಂದಿನ ದಿನಗಳಲ್ಲಿ ಮತ್ತಷ್ಟು ಉನ್ನತ ಸ್ಥಾನಕ್ಕೆ ಏರಲಿ ಹಾಗೂ ಮುಂದಿನ ದಿನದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಚುಕ್ಕಾಣಿ ಹಿಡಿಯಲಿ ಎಂದು ಹಾರೈಸಿದರು.

 

ಮಾಜಿ ಅಂತರಾಷ್ಟ್ರೀಯ ಕ್ರೀಡಾಪಟು ಆನಂದ್ ರವರು ಮಾತನಾಡಿ ತುಮಕೂರು ವಿಶ್ವವಿದ್ಯಾನಿಲಯದ ರುವಾರಿ ಡಾಕ್ಟರ್ ಜಿ ಪರಮೇಶ್ವರ್ ರವರು, ಅವರ ಹುಟ್ಟುಹಬ್ಬವನ್ನು ಹಲವು ವರ್ಷಗಳಿಂದ ಆಚರಿಸಲಾಗುತ್ತಿದ್ದು ಮುಂದಿನ ದಿನದಲ್ಲಿ ಡಾಕ್ಟರ್ ಜಿ ಪರಮೇಶ್ವರ್ ರವರು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆ ಏರಲಿ ಎಂಬುದು ಅಭಿಮಾನಿಗಳ ಆಸೆಯಾಗಿದೆ ಎಂದರು.

 

 

ಕಾರ್ಯಕ್ರಮದಲ್ಲಿ ಭೈರಪ್ಪ, ರಾಜಣ್ಣ, ಲಕ್ಷ್ಮಯ್ಯ, ಸುಜಾತ, ಶ್ರೀನಿವಾಸ್, ಪುಟ್ಟರಾಜು, ಆಶ್ರಮ ಶಾಲೆಯ ಲೇಪಾಕ್ಷ ಪ್ಪ, ತಿಪ್ಪೇಸ್ವಾಮಿ ಸೇರಿದಂತೆ ಇತರರು ಹಾಜರಿದ್ದರು

Leave a Reply

Your email address will not be published. Required fields are marked *

You cannot copy content of this page

error: Content is protected !!