ಅಭಿಮಾನಿಯ ಮನೆಗೆ ಭೇಟಿ ನೀಡಿದ _ಡಾ ಜಿ ಪರಮೇಶ್ವರ್.

 

 

ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಕೊರಟಗೆರೆ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾಕ್ಟರ್ ಜಿ ಪರಮೇಶ್ವರ್ ಅವರು ಕುಣಿಗಲ್ ನಲ್ಲಿ ಇರುವ ಅಭಿಮಾನಿಯ ಮನೆಗೆ ಭೇಟಿ ನೀಡಿದರು.

 

ಅಖಿಲ ಕರ್ನಾಟಕ ಡಾಕ್ಟರ್ ಜಿ ಪರಮೇಶ್ವರ್ ಯುವ ಸೈನ್ಯ ದ ರಾಜ್ಯಾಧ್ಯಕ್ಷರಾದ ನಗುತ ರಂಗನಾಥ್ ಅವರ ಮನೆಗೆ ಭೇಟಿ ನೀಡಿ ಕುಟುಂಬದವರೊಂದಿಗೆ ಚರ್ಚೆ ನಡೆಸಿದರು.

ಕುಣಿಗಲ್ ನಗುತ ರಂಗನಾಥ್ ರವರು ಡಾಕ್ಟರ್ ಜಿ ಪರಮೇಶ್ವರ್ ಅವರ ಅಭಿಮಾನಿಯಾಗಿದ್ದು ರಾಜ್ಯಾದ್ಯಂತ ಡಾಕ್ಟರ್ ಜಿ ಪರಮೇಶ್ವರ್ ಅವರ ಹೆಸರಿನಲ್ಲಿ ಯುವಪಡೆಯನ್ನು ಪರಮೇಶ್ವರ್ ಯುವ ಸೈನ್ಯದ ಹೆಸರಿನಲ್ಲಿ ರಾಜ್ಯದ್ಯಂತ ಸಂಘಟನೆ ಮಾಡುವ ಮೂಲಕ ಡಾಕ್ಟರ್ ಜಿ ಪರಮೇಶ್ವರ್ ಅವರ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಪ್ರಯತ್ನವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದು ರಾಜ್ಯಾದ್ಯಂತ ಸಂಘಟನೆಯನ್ನು ವಿಸ್ತರಿಸುತ್ತಿದ್ದಾರೆ.

 

ಇನ್ನು ಡಾಕ್ಟರ್ ಜಿ ಪರಮೇಶ್ವರ್ ಅವರ ಅನಿರೀಕ್ಷಿತ ಭೇಟಿಯಿಂದ ಕುಟುಂಬವರ್ಗದವರ ಸಂತಸ ಮತ್ತಷ್ಟು ಇಮ್ಮಡಿಗೊಳಿಸಿತ್ತು.

 

ಇದೇ ಸಂದರ್ಭದಲ್ಲಿ ನಗುತ ರಂಗನಾಥ್ ರವರು ಯುವ ಸೈನ್ಯವನ್ನು ಉತ್ತಮ ರೀತಿಯಲ್ಲಿ ರಾಜ್ಯಾದ್ಯಂತ ವಿಸ್ತರಿಸುತ್ತಿದ್ದು ಅದರ ಮೂಲಕ ಮತ್ತಷ್ಟು ಸಮಾಜಮುಖಿ ಕಾರ್ಯಗಳನ್ನು ಮಾಡಿ ಎಂದು ಸಲಹೆ ನೀಡಿದರು.

 

 

ಇದೇ ಸಂದರ್ಭದಲ್ಲಿ ಅಖಿಲ ಕರ್ನಾಟಕ ಡಾಕ್ಟರ್ ಜಿ ಪರಮೇಶ್ವರ್ ಯುವ ಸೈನ್ಯದ ರಾಜ್ಯಾಧ್ಯಕ್ಷ ನಗುತಾ ರಂಗನಾಥ್, ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ರಾಮಕೃಷ್ಣಪ್ಪ, ಪರಮೇಶ್ವರ್ ಯುವ ಸೈನ್ಯ ದ ಪದಾಧಿಕಾರಿಗಳು ಹಾಗೂ ಕುಟುಂಬವರ್ಗದವರು ಹಾಜರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!