ಅತ್ಯಾಚಾರ ಆರೋಪಿ ಬಂಧನಕ್ಕೆ ಒತ್ತಾಯಿಸಿದ ದಲಿತ ಸಂಘಟನೆಗಳು.

ಅತ್ಯಾಚಾರ ಆರೋಪಿ ಬಂಧನಕ್ಕೆ ಒತ್ತಾಯಿಸಿದ ದಲಿತ ಸಂಘಟನೆಗಳು.

 

ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಚೌಡೇಶ್ವರಿ ಆಳ ಗ್ರಾಮದಲ್ಲಿ ಸೋಮವಾರ ಹಾಡುಹಗಲೇ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪಿ ಯನ್ನು ಕೂಡಲೇ ಬಂಧಿಸಿ ಶಿಕ್ಷೆ ನೀಡಬೇಕು ಎಂದು ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ದಲಿತ ಸ್ವಾಭಿಮಾನಿ ಸಂಘರ್ಷ ಸಮಿತಿ ಹಾಗೂ ವಿವಿಧ ದಲಿತ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

 

ಇನ್ನು ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳ ಮುಖಂಡರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ರಾಜ್ಯದಲ್ಲಿರುವ ದಲಿತರ ರಕ್ಷಣೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪದೇಪದೇ ದಲಿತರ ಮೇಲೆ ಹಲ್ಲೆ ಅತ್ಯಾಚಾರ ಪ್ರಕರಣಗಳು ರಾಜ್ಯದಲ್ಲಿ ನಡೆಯುತ್ತಿದೆ ಅದನ್ನು ತಡೆಯುವ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

ದಲಿತ ಸ್ವಾಭಿಮಾನಿ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಶಿವಕುಮಾರ್ ಮಾತನಾಡಿ ಯಾದಗಿರಿಯ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣ ಹೇಯ ಕೃತ್ಯವಾಗಿದ್ದು ಒಬ್ಬ ಕಡು ಬಡ ದಲಿತ ಹೆಣ್ಣು ಮಗಳ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹೇಯ ಕೃತ್ಯವನ್ನು ಮಾಡಿರುವ ಆರೋಪಿಯನ್ನು ಶೀಘ್ರವೇ ಬಂಧಿಸಬೇಕು ಇಂತಹ ನರರೂಪ ರಾಕ್ಷಸನಿಗೆ ಕೂಡಲೇ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

 

ಇನ್ನು ಪ್ರತಿಭಟನೆಯಲ್ಲಿ ದಲಿತ ಸಾಮ್ರಾಜ್ಯ ಸ್ಥಾಪನೆ ಸಮಿತಿಯ ತುಮಕೂರು ಜಿಲ್ಲಾಧ್ಯಕ್ಷ ನಾಗೇಶ್, ಕರ್ನಾಟಕ ಮಾದಿಗ ಸಂಘದ ಜಿಲ್ಲಾಧ್ಯಕ್ಷರಾದ ರಾಮಮೂರ್ತಿ, ಕೆಂಪರಾಜು ಸೇರಿದಂತೆ ವಿವಿಧ ದಲಿತ ಸಂಘಟನೆಗಳ ಮುಖಂಡರು ಪದಾಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!