ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ,ಕ್ರಮಕ್ಕೆ ದಲಿತ ಸ್ವಾಭಿಮಾನಿ ಸಂಘರ್ಷ ಸಮಿತಿ ಆಗ್ರಹ.

 

ಬೆಂಗಳೂರಿನಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ರವರ ಕಚೇರಿಯಲ್ಲಿ ಸಭೆ ನಡೆಯುತ್ತಿದ್ದ ವೇಳೆ ಏಕಾಏಕಿ ಪೊಲೀಸರು ಅವರ ಕಚೇರಿಗೆ ನುಗ್ಗಿ ಸಭೆ ನಡೆಸುತ್ತಿದ್ದ ಮುಖಂಡರ ಕೈಯಲ್ಲಿದ್ದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಕಸಿದು ಹೊಡೆದುಹಾಕಿ ಅಪಮಾನ ಮಾಡಿರುವವರ ಬಗ್ಗೆ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಸ್ವಾಭಿಮಾನಿ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷರಾದ ಬಂಡೆ ಕುಮಾರ್ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

 

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಡಿದ ಅಪಮಾನ ನಿಜಕ್ಕೂ ಖಂಡನೀಯ. ಏಕಾಏಕಿ ಕಚೇರಿಗೆ ನುಗ್ಗಿ ಮುಖಂಡರ ಕೈಯಲ್ಲಿದ್ದ ಭಾವಚಿತ್ರವನ್ನು ಹೊಡೆದು ಹಾಕಿರುವುದು ಸರಿಯಲ್ಲ ಕೂಡಲೇ ಈ ಘಟನೆಗೆ ಸಂಬಂಧಿಸಿದಂತೆ ಯಾರೇ ಆಗಲಿ ಅವರ ಮೇಲೆ ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಹಾಗೂ ಮುಂದೆಂದು ಈ ತರಹದ ಘಟನೆಗಳು ನಡೆಯದಂತೆ ಸರ್ಕಾರ ಗಮನಹರಿಸಬೇಕು ಎಂದು ರಾಜ್ಯಾಧ್ಯಕ್ಷರಾದ ಬಂಡೆಕುಮಾರ್ ರವರು ತಿಳಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ರಂಗನಾಥ್ ,ರಾಜಣ್ಣ ,ನಾಗೇಶ್ ಹಾಜರಿದ್ದರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version