ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದ ಮಾಜಿ ಸಚಿವ ಟಿ ಬಿ ಜಯಚಂದ್ರ

 

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರನ್ನು ಭೇಟಿ ಮಾಡಿದ ಮಾಜಿ ಸಚಿವ ಟಿ .ಬಿ ಜಯಚಂದ್ರ.

 

ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರನ್ನು ಬೆಂಗಳೂರಿನ ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಭೇಟಿಯಾದ ಮಾಜಿ ಸಚಿವರು ಹಾಗೂ ಶಿರಾ ಕ್ಷೇತ್ರದ ಮಾಜಿ ಶಾಸಕರಾದ ಟಿಬಿ ಜಯಚಂದ್ರ ಅವರು ಸಿದ್ದರಾಮಯ್ಯರವರನ್ನು ಭೇಟಿ ಮಾಡಿ ತುಮಕೂರು ಜಿಲ್ಲೆಯ ರಾಜಕೀಯ ವಿಚಾರಗಳನ್ನ ಚರ್ಚಿಸಿದರು. ತುಮಕೂರು ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಬದಲಾವಣೆ ವಿಚಾರ ತುಮಕೂರು ಜಿಲ್ಲೆಯಲ್ಲಿ ಗರಿಗೆದರಿದ್ದು ಈ ಸಂದರ್ಬದಲ್ಲಿ  ಕಾಂಗ್ರೆಸ್ ಹಿರಿಯ ನಾಯಕರ ಈ ಬೇಟಿ ಹಲವು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಇದೇ ಸಂದರ್ಭದಲ್ಲಿ ಮಾಜಿ ಮುಖ್ಯ ಸಚೇತಕರಾದ ಅಶೋಕ ಪಟ್ಟಣ ಅವರು, ಟಿ ಬಿ ಜಯಚಂದ್ರ ರವರ ಪುತ್ರ ಸಂಜಯ್ ಜಯಚಂದ್ರ ಹಾಗೂ ತುಮಕೂರು ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಶಿ ಹುಲಿಕುಂಟೆ ಸೇರಿದಂತೆ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version