ಎಚ್ ಡಿ ಕುಮಾರಸ್ವಾಮಿ ಭೇಟಿಯಾದ ಮಾಜಿ ಸಚಿವ ಶಿವಣ್ಣ ಕುತೂಹಲ ಕೆರಳಿಸಿದ ಕೆರಳಿಸಿದ ರಾಜಕೀಯ ನಡೆ

ಎಚ್ ಡಿ ಕುಮಾರಸ್ವಾಮಿ ಭೇಟಿಯಾದ ಮಾಜಿ ಸಚಿವ ಶಿವಣ್ಣ ಕುತೂಹಲ ಕೆರಳಿಸಿದ ಕೆರಳಿಸಿದ ರಾಜಕೀಯ ನಡೆ.

 

ಬೆಂಗಳೂರು – ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರವರನ್ನ ಇಂದು ತುಮಕೂರಿನ ಮಾಜಿ ಸಚಿವ ಸೊಗಡು ಶಿವಣ್ಣ ರವರು ಭೇಟಿ ಮಾಡಿ ರಾಜಕೀಯ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

 

 

 

ಇಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರವರನ್ನ ಭೇಟಿ ಮಾಡಿದ ಶಿವಣ್ಣರವರು ತುಮಕೂರಿನ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದು ಚರ್ಚೆಗೆ ಸಂಬಂಧಿಸಿದ ಫೋಟೋ ಒಂದು ವೈರಲ್ ಆಗಿದ್ದು  ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಅಭ್ಯರ್ಥಿಯಾಗಿ ಸೊಗಡು ಶಿವಣ್ಣರವರು ಕಣಕ್ಕೆ ಇಳಿಯುವ ಸಂಬಂಧ ಚರ್ಚೆ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

 

 

 

 

ಇತ್ತೀಚಿಗೆ ಮಾಜಿ ಸಚಿವ ಸೊಗಡು ಶಿವಣ್ಣರವರು ಬಿಜೆಪಿ ತೊರೆದು ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸುವ ಸಂಬಂಧ ಕಾರ್ಯಕರ್ತರ ಸಭೆಯಲ್ಲಿ ಘೋಷಣೆ ಮಾಡಿದ ಬೆನ್ನಲ್ಲೇ ಮಾಜಿ ಸಚಿವ ಸೊಗಡು ಶಿವಣ್ಣರವರು ಜೆಡಿಎಸ್ ಪಕ್ಷಕ್ಕೆ ಸೇರಲಿದ್ದಾರೆ ಎನ್ನುವ ಚರ್ಚೆ ಶುರುವಾಗಿರುವ ಬೆನ್ನಲ್ಲೇ ಮಾಜಿ ಸಚಿವ ಸೊಗಡು ಶಿವಣ್ಣ ರವರು ಕುಮಾರಸ್ವಾಮಿ ರವರನ್ನು ಭೇಟಿ ಮಾಡಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು.

 

 

 

 

ತುಮಕೂರು ನಗರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಸೊಗಡು ಶಿವಣ್ಣ ರವರು ಜೆಡಿಎಸ್ ಪಕ್ಷದಿಂದ ಕಣಕ್ಕೆ ಇಳಿಯುವುದು ಬಹುತೇಕ ಖಚಿತ ಎಂದು ಜೆಡಿಎಸ್ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

 

 

ವರದಿ – ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!