ತುಮಕೂರು ನಗರ ಬಿಜೆಪಿಯಿಂದ ಅಭ್ಯರ್ಥಿ ನಾನೇ ಎಂದು ಮಾಜಿ ಸಚಿವ ಸೊಗಡು ಶಿವಣ್ಣಗೆ ಟಕ್ಕರ್ ಕೊಟ್ರ    ಶಾಸಕ ಜ್ಯೋತಿ ಗಣೇಶ್….???

ತುಮಕೂರು ನಗರ ಬಿಜೆಪಿಯಿಂದ ಅಭ್ಯರ್ಥಿ ನಾನೇ ಎಂದು ಮಾಜಿ ಸಚಿವ ಸೊಗಡು ಶಿವಣ್ಣಗೆ ಟಕ್ಕರ್ ಕೊಟ್ರ ಶಾಸಕ ಜ್ಯೋತಿ ಗಣೇಶ್….???

 

 

ತುಮಕೂರು : ಮುಂಬರುವ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ತುಮಕೂರು ನಗರ ಬಿಜೆಪಿ ಪಕ್ಷದಿಂದ ಜಿ.ಬಿ.ಜ್ಯೋತಿಗಣೇಶ್ ಆದ ನಾನೇ ಅಭ್ಯರ್ಥಿಯಾಗಿ ನಿಲ್ಲುವುದು ಖಚಿತವೆಂದು ಸ್ಪಷ್ಠಪಡಿಸಿದ್ದಾರೆ.

 

 

 

 

ನಗರದ ತಮ್ಮ ಕಛೇರಿಯಲ್ಲಿ ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಹಾಲಿ ಶಾಸಕರು ಮಾರ್ಚ್ 5 ರಂದು ತುಮಕೂರು ನಗರದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣವಾಗಿರುವ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಲು ಮುಖ್ಯಮಂತ್ರಿಗಳಾದಿಯಾಗಿ ರಾಷ್ಟ್ರೀಯ ಮತ್ತು ರಾಜ್ಯದ ಪ್ರಮುಖ ಬಿಜೆಪಿ ನಾಯಕರುಗಳು ಆಗಮಿಸಲಿದ್ದಾರೆಂದು ತಿಳಿಸಿದರು.

 

 

 

 

ಶಿಕ್ಷಣದ ವಲಯದ ಅಭಿವೃದ್ಧಿ ಕಾಮಗಾರಿಗಳು, ಕ್ರೀಡಾ ವಲಯದ ಅಭಿವೃದ್ಧಿ ಕಾಮಗಾರಿಗಳು, ಜಲ ಸಂರಕ್ಷಣೆ ಹಾಗೂ ಕೆರೆಗಳ ಅಭಿವೃದ್ಧಿ ಕಾಮಗಾರಿಗಳು,ಕೊಳೆಗೇರಿ ಅಭಿವೃದ್ಧಿ ಕಾಮಗಾರಿಗಳು, ದೇವಾಲಯಗಳ ಜೀರ್ಣೋದ್ಧಾರ ಅಭಿವೃದ್ಧಿ, ಒಳಚರಂಡಿ ವ್ಯವಸ್ಥೆ ಸಮುದಾಯ ಭವನಗಳ ನಿರ್ಮಾಣ ಸೇರಿದಂತೆ ಇನ್ನೂ ಅನೇಕ ಅಭಿವೃದ್ಧಿ ಕಾಮಗಾರಿಗಳು ನನ್ನ ಅವಧಿಯಲ್ಲಿ ಆಗಿರುವುದರಿಂದ ಬಿಜೆಪಿ ಪಕ್ಷದ ಎಲ್ಲಾ ಪ್ರಮುಖ ಮುಖಂಡರು ನನ್ನ ಹೆಸರನ್ನು ರಾಷ್ಟ್ರೀಯ ಚುನಾವಣಾ ಆಯ್ಕೆ ಸಮಿತಿಗೆ ಶಿಫಾರಸ್ಸು ಮಾಡಿರುತ್ತಾರೆಂಬ ವಿಷಯವನ್ನೂ ಸಹ ಬಹಿರಂಗ ಪಡಿಸದ್ದಾರೆ.

 

 

 

 

 

ನಾನು ತುಮಕೂರಿನಗರದಿಂದ 2018ರಲ್ಲಿ ನಗರ ಜನರ ಆಶೀರ್ವಾದದಿಂದ ಗೆಲುವು ಸಾಧಿಸಿ, ಅನೇಕ ಅಭಿವೃದ್ಧಿ ಕಾರ್ಯಗಳನ್ನು ನೆರವೇರಿಸಿದ್ದು, ಹೀಗಾಗಿ ಪಕ್ಷವು ಮತ್ತೊಮ್ಮೆ ನನಗೇ ಟಿಕೇಟ್ ನೀಡುವ ಭರವಸೆಯನ್ನು ನೀಡಿರುತ್ತಾರೆ. ಏಪ್ರಿಲ್ ತಿಂಗಳಲ್ಲಿ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೇ ಬರುವುದು ಬಹುತೇಖ ಖಚಿತವಾಗಿದೆ, ಯಾವುದೇ ಕಾರಣಕ್ಕೂ ಬೇರೆಯವರಿಗೆ ಟಿಕೇಟ್ ಬರುವುದಿಲ್ಲವೆಂದು ನಾನು ಈ ಮೂಲಕ ಸ್ಪಷ್ಠಪಡಿಸುತ್ತಿದ್ದೇನೆಂದರು.

 

 

 

 

 

ಮುಂದುವರೆದು, ಇತ್ತೀಚಿನ ದಿನಗಳಲ್ಲಿ ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಿದ್ದೇನೆಂಬ ಊಹಾ ಪೋಹಗಳು ಹರಿದಾಡುತ್ತಿರುವುದು ನನ್ನ ಗಮನಕ್ಕೆ ಬಂದಿದ್ದು, ನಾನು ಯಾವುದೇ ವಿಧದಲ್ಲಿಯೂ ಬಿಜೆಪಿ ಪಕ್ಷವನ್ನು ಬಿಟ್ಟು ಹೋಗುವುದಿಲ್ಲವೆಂದು ಜೊತೆಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆಂಬ ಸುದ್ದಿ ಹರಿದಾಡುತ್ತಿದ್ದು ಇವೆಲ್ಲವೂ ನನ್ನ ಗಮನಕ್ಕೆ ಬಂದಿದೆ, ಆದರೆ ನಾನು ಯಾವುದೇ ಕಾರಣಕ್ಕೂ ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಮುಂಬರುವ ಚುನಾವಣೆಯಲ್ಲಿ ನಾನು ತುಮಕೂರು ನಗರ ವಿಧಾನಸಭಾ ಕ್ಷೇತ್ರದಿಂದ ಮಾತ್ರವೇ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆಂದು ಸ್ಪಷ್ಟಪಡಿಸಿದರು.

 

 

 

ಇನ್ನುಳಿದಂತೆ ಜನರು ಯಾವುದೇ ಗೊಂದಲಕ್ಕೇ ಹೋಗಬಾರದು, ನಾನು ತುಮಕೂರು ನಗರ ಬಿ.ಜೆ.ಪಿ. ಅಭ್ಯರ್ಥಿಯೇ ಎಂದು ಹೇಳಿದ್ದಾರೆ.

 

 

 

 

 

ಇನ್ನು ಇತ್ತೀಚಿಗೆ ಮಾಜಿ ಸಚಿವ ಸೊಗಡು ಶಿವಣ್ಣ ರವರಿಗೆ ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ನೀಡಿ ಹಾಲಿ ಶಾಸಕ ಜ್ಯೋತಿ ಗಣೇಶ ರವರಿಗೆ ಸಂಸದ ಸ್ಥಾನಕ್ಕೆ ಟಿಕೆಟ್ ನೀಡಲಾಗುವುದು ಎನ್ನುವ ಚರ್ಚೆ ಸಹ ಪಕ್ಷದ ವಲಯದಲ್ಲಿ ನಡೆದಿದ್ದು ಅದರಂತೆ ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣರವರಿಗೆ ಟಿಕೆಟ್ ನೀಡಲಾಗುವುದು ಎನ್ನುವ ಚರ್ಚೆ ನಡೆಯುತ್ತಿದ್ದ ಬೆನ್ನಲ್ಲೇ ಇಂದು ಹಾಲಿ ಶಾಸಕ ಜ್ಯೋತಿ ಗಣೇಶ್ ರವರು ತಾವು ತುಮಕೂರು ನಗರಸಭಾ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದು ಖಚಿತ ಎಂದು ಹೇಳಿಕೆ ನೀಡುವ ಮೂಲಕ ಮಾಜಿ ಸಚಿವ ಸೊಗಡು ಶಿವಣ್ಣರವರಿಗೆ ಟಾಂಗ್ ನೀಡಿದ್ದಾರೆ ಎಂದರೆ ತಪ್ಪಾಗಲಾರದು.

 

ಟಿಕೆಟ್ ಹಾಗೂ ಹಾಲಿ ಮಾಜಿ ಶಾಸಕರ ನಡುವೆ ಪೈಪೋಟಿ

 

ಇನ್ನು ಮುಂಬರುವ ಚುನಾವಣೆಯಲ್ಲಿ ಹೇಗಾದರೂ ಮಾಡಿ ಟಿಕೆಟ್ ಪಡೆಯಲೇಬೇಕು ಎನ್ನುವ ಆಟಕ್ಕೆ ಬಿದ್ದಿರುವ ಮಾಜಿ ಸಚಿವ ಸೊಗಡು ಶಿವಣ್ಣ ರವರು ಕೇಂದ್ರ ಹಾಗೂ ರಾಜ್ಯದ ನಾಯಕರೊಂದಿಗೆ ನಿಕಟ ಸಂಪರ್ಕ ಮಾಡುವ ಮೂಲಕ ಟಿಕೇಟ್ ಗಾಗಿ ತೀವ್ರ ಪೈಪೋಟಿ ನೀಡುತ್ತಿದ್ದಾರೆ ಅದರೊಂದಿಗೆ ಹಾಲಿ ಶಾಸಕರಾದ ಜ್ಯೋತಿ ಗಣೇಶ್ ಸಹ ತುಮಕೂರು ನಗರದಲ್ಲಿ ತಾವು ಮಾಡಿರುವ ಹಲವು ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ತಮಗೂ ಸಹ ಟಿಕೆಟ್ ನೀಡಬೇಕು ಎನ್ನುವ ಮೂಲಕ ತಾವು ಸಹ ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲೀ ಬಿಜೆಪಿ ಪಕ್ಷದಿಂದ ಟಿಕೆಟ್ ಪಡೆದೆ ತೀರಬೇಕು ಎನ್ನುವ ಹಠಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

 

 

 

ಇನ್ನು ಹಾಲಿ ಶಾಸಕ ಜ್ಯೋತಿ ಗಣೇಶ್ ರವರು ನೀಡಿರುವ ಹೇಳಿಕೆ ಬೆನ್ನಲ್ಲೇ ತುಮಕೂರು ನಗರ ಬಿಜೆಪಿ ಪಾಳ್ಯದಲ್ಲೂ ಸಹ ಟಿಕೆಟ್ ಹಂಚಿಕೆ ವಿಚಾರದಲ್ಲಿ ಗೊಂದಲ ಉಂಟಾಗಿದೆ ಎನ್ನುವ ಸ್ಪಷ್ಟ ಸಂದೇಶ ಸಹ ಬಿಜೆಪಿ ಪಾಳಯದಲ್ಲಿ ಶುರುವಾಗಿದೆ.

 

 

 

 

ವರದಿ- ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version