ತುಮಕೂರಿನ ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆಗೆ ಹೆಲಿಕ್ಯಾಪ್ಟರ್ ನಲ್ಲಿ ಪುಷ್ಪರ್ಚನೆ.

ತುಮಕೂರಿನ ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆಗೆ ಹೆಲಿಕ್ಯಾಪ್ಟರ್ ನಲ್ಲಿ ಪುಷ್ಪರ್ಚನೆ.

 

 

ತುಮಕೂರಿನ ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಎರಡನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ವೀರಶೈವ ಲಿಂಗಾಯತ ಮಹಾವೇದಿಕೆ ವೀರಶೈವ ಲಿಂಗಾಯತ ಯುವ ವೇದಿಕೆಯಿಂದ ಕರ್ನಾಟಕ ರತ್ನ ಪದ್ಮಭೂಷಣ ಲಿಂಗೈಕ್ಯ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿ ಗಳವರ ಗದ್ದುಗೆ ಗೆ ಸೋಮವಾರ ಮಧ್ಯಾಹ್ನ ಹೆಲಿಕ್ಯಾಪ್ಟರ್ ನಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಶಿವಕುಮಾರ ಶ್ರೀಗಳಿಗೆ ಗೌರವ ಸಲ್ಲಿಸಲಾಯಿತು

 

 

ಇನ್ನು ಹೆಲಿಕ್ಯಾಪ್ಟರ್ ನಲ್ಲಿ ಸಿದ್ದಗಂಗಾ ಶ್ರೀಗಳ ಗದ್ದುಗೆ ಪುಷ್ಪಾರ್ಚನೆ ಮಾಡುವ ವಿಷಯ ತಿಳಿದು ಬೆಳಗ್ಗಿನಿಂದಲೇ ಸಾವಿರಾರು ಭಕ್ತಾದಿಗಳು ಮಠಕ್ಕೆ ಭೇಟಿ ನೀಡಿದರು ಇನ್ನೂ ಮಠಕ್ಕೆ ಭೇಟಿ ನೀಡಿದ ಭಕ್ತರಿಗಾಗಿ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.

 

 

ವಿಶೇಷವೆಂದರೆ ಹೆಲಿಕ್ಯಾಪ್ಟರ್ ನಲ್ಲಿ ಪುಷ್ಪಾರ್ಚನೆ ಮಾಡುವ ನಿಮಿತ್ತ ಇಂದು ಸಿದ್ದಗಂಗಾ ಮಠಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಮಠಕ್ಕೆ ಆಗಮಿಸಿದರು. ಶಿವಕುಮಾರ ಶ್ರೀಗಳ ಎರಡನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅನೇಕ ಭಕ್ತಾದಿಗಳು ಮಠಕ್ಕೆ ಆಗಮಿಸಿದ್ದರು .

 

ಬೆಳಗ್ಗಿನಿಂದಲೇ ಸಿದ್ದಗಂಗಾ ಮಠಕ್ಕೆ ಅನೇಕ ಗಣ್ಯರು ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆಗೆ ನಮಿಸಿ ಸಿದ್ಧಲಿಂಗ ಶ್ರೀಗಳ ಆಶೀರ್ವಾದ ಪಡೆದರು.ಇನ್ನು ಸಿದ್ದಗಂಗಾ ಮಠಕ್ಕೆ ನಟರಾದ ಕೃಷ್ಣ, ಮಿಲನ ನಾಗರಾಜ್ ಸೇರಿದಂತೆ ಹಲವರು ಭೇಟಿ ನೀಡಿದ್ದು ವಿಶೇಷವಾಗಿತ್ತು.

Leave a Reply

Your email address will not be published. Required fields are marked *

You cannot copy content of this page

error: Content is protected !!