ಗೃಹ ರಕ್ಷಕ ದಳದ ಸಿಬ್ಬಂದಿಗಳಿಗೆ ದಿನಸಿ ಕಿಟ್ ವಿತರಣೆ

 

ಕರೋನ ಸಂಕಷ್ಟ ಕಾಲದಲ್ಲಿ ಪ್ರಾಣದ ಹಂಗು ತೊರೆದು ನಿರಂತರ ಸೇವೆ ಸಲ್ಲಿಸುತ್ತಿರುವ ತುಮಕೂರಿನ ಗೃಹ ರಕ್ಷಕದಳದ ಸಿಬ್ಬಂದಿಗಳಿಗೆ ತುಮಕೂರಿನ ಭಗತ್ ಕ್ರಾಂತಿ ಸೇನೆ ವತಿಯಿಂದ ದಿನಸಿ ಕಿಟ್ ವಿತರಿಸಲಾಯಿತು.

 

ಗೃಹರಕ್ಷಕ ದಳದ ಸಿಬ್ಬಂದಿಗಳಿಗೆ ದಿನಸಿ ಕಿಟ್ ವಿತರಿಸಿದ ತುಮಕೂರು ನಗರ ಶಾಸಕರಾದ ಜಿ ಬಿ ಜ್ಯೋತಿಗಣೇಶ್ ರವರು ಯುವಕರು ಹಾಗೂ ಭಗತ್ ಕ್ರಾಂತಿ ಸೇನೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

 

ತುಮಕೂರು ಜಿಲ್ಲಾ ಗೃಹರಕ್ಷಕ ದಳದ ಸಮಾದೇಶ್ಟರು ಆದ ಪಾತಣ್ಣ ಮಾತನಾಡಿ ಕರೋನ ಸಂಕಷ್ಟ ಕಾಲದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುವ ಗೃಹರಕ್ಷಕ ದಳದ ಸಿಬ್ಬಂದಿಗಳ ಸೇವೆ ನೆನೆದು ಭಗತ್ ಕ್ರಾಂತಿ ಸೇನೆಯ ಪದಾಧಿಕಾರಿಗಳು ದಿನಸಿ ಕಿಟ್ ಹಂಚುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ ಆದ್ದರಿಂದ ಗೃಹರಕ್ಷಕದಳದ ಸಿಬ್ಬಂದಿಗಳ ಪರವಾಗಿ ಧನ್ಯವಾದಗಳನ್ನು ತಿಳಿಸಿದರು.

 

 

ಭಗತ್ ಕ್ರಾಂತಿ ಸೇನೆಯ ಆರಾಧ್ಯ ರವರು ಮಾತನಾಡಿ ಕರೋನಾ ಸಂಕಷ್ಟ ಕಾಲದಲ್ಲಿ ದೇಶ ಹಾಗೂ ರಾಜ್ಯದ ಜನತೆ ತೀವ್ರ ಸಂಕಷ್ಟ ಅನುಭವಿಸುತ್ತಿದೆ ಇದನ್ನು ಅರಿತು ತುಮಕೂರಿನ ಭಗತ್ ಕ್ರಾಂತಿ ಸೇನೆಯ ವತಿಯಿಂದ ತುಮಕೂರು ನಗರದಾದ್ಯಂತ ಸಂಕಷ್ಟದಲ್ಲಿರುವ ಕುಟುಂಬಗಳನ್ನು ಗುರುತಿಸಿ ಸಾವಿರದ ಐನ್ನೂರಕ್ಕೂ ಹೆಚ್ಚು ದಿನಸಿ ಕಿಟ್ ಈಗಾಗಲೇ ವಿತರಿಸಲಾಗಿದ್ದು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು.

 

ಈ ಸಂದರ್ಭದಲ್ಲಿ ತುಮಕೂರು ಮಹಾನಗರ ಪಾಲಿಕೆಯ ಮಹಾಪೌರರಾದ ಕೃಷ್ಣಪ್ಪ, ಪಾಲಿಕೆ ಸದಸ್ಯರಾದ ವಿಷ್ಣುವರ್ಧನ್, ಆಟೋ ಯಡಿಯೂರಪ್ಪ, ಭಗತ್ ಕ್ರಾಂತಿ ಸೇನೆಯ ಪದಾಧಿಕಾರಿಗಳಾದ ಚೇತನ್, ಪ್ರವೀಣ್, ನಾಗೇಶ್, ಶಶಿ ,ರಘು, ರಾಕಿ ಸೇರಿದಂತೆ ಗೃಹರಕ್ಷಕ ದಳದ ಸಿಬ್ಬಂದಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!