ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಆಹಾರಧಾನ್ಯ ಕಿಟ್ ವಿತರಣೆ.

ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಆಹಾರಧಾನ್ಯ ಕಿಟ್ ವಿತರಣೆ.

 

ತುಮಕೂರು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ತುಮಕೂರು ನಗರದ ವೀರಸಾಗರ ಬಡಾವಣೆಯ ಸರ್ಕಾರಿ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಒಂದ ರಿಂದ ಐದನೇ ತರಗತಿಯ 2020-21 ನೇ ಸಾಲಿನ ನವೀಕರಣ ಹೊಂದಿದ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಆಹಾರಧಾನ್ಯದ ಕಿಟ್ ಗಳನ್ನು ವಿತರಿಸಲಾಯಿತು.

 

ಕೋವಿಡ್-19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶಾಲೆಯಲ್ಲಿ ಇರದ ಕಾರಣ ಸರ್ಕಾರದ ಮಾರ್ಗಸೂಚಿಯಂತೆ ವಿದ್ಯಾರ್ಥಿಗಳಿಗೆ ದವಸಧಾನ್ಯಗಳನ್ನು ವಿತರಿಸ ಬೇಕಾಗಿದ್ದು ಅದರಂತೆ ಮಕ್ಕಳು ಇರುವ ಸ್ಥಳಕ್ಕೆ ತೆರಳಿ ಇಲಾಖೆಯ ವತಿಯಿಂದ ಮಕ್ಕಳಿಗೆ ಆಹಾರ ಧಾನ್ಯದ ಕೀಟ್ ಗಳನ್ನು ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರೇಮ ರವರು ತಿಳಿಸಿದರು.

 

ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀನಿವಾಸ್, ಸರ್ಕಾರಿ ವಸತಿ ಶಾಲೆಯ ಮುಖ್ಯ ಶಿಕ್ಷಕರಾದ ಸುಮಾ, ಸಹಶಿಕ್ಷಕಿ ಮಮತಾ, ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಶಿವಪ್ಪ ಹಾಜರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version