ಗುಜರಾತ್ ಎಪಿಎಂಸಿ ಮಾರುಕಟ್ಟೆಯಲ್ಲಿ_ ತುಮಕೂರಿನ ಮಾಜಿ ಸಚಿವ ಸೊಗಡು ಶಿವಣ್ಣ.

ಗುಜರಾತ್ ಎಪಿಎಂಸಿ ಮಾರುಕಟ್ಟೆಯಲ್ಲಿ_ ತುಮಕೂರಿನ ಮಾಜಿ ಸಚಿವ ಸೊಗಡು ಶಿವಣ್ಣ.

 

ತುಮಕೂರು_ರೈತರು ಬೆಳೆಯುವ ಉತ್ಪನ್ನಗಳನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು ಅವುಗಳನ್ನು ಉತ್ತಮ ರೀತಿಯಲ್ಲಿ ಶೇಖರಣೆ ಮಾಡಿ ಅವುಗಳನ್ನು ವರ್ಷಪೂರ್ತಿ ಬಳಕೆ ಮಾಡುವ ಬಗ್ಗೆ ತುಮಕೂರಿನ ಮಾಜಿ ಸಚಿವ ಸೊಗಡು ಶಿವಣ್ಣ ರವರು ಗುಜರಾತಿನ ಎಪಿಎಂಸಿ ಮಾರುಕಟ್ಟೆ ಹಾಗೂ ತರಕಾರಿ ಹಾಗೂ ಹಣ್ಣುಗಳ ಸಂಸ್ಕರಣ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮಾಹಿತಿ ಪಡೆದಿದ್ದಾರೆ.

ಇನ್ನು ರಾಜ್ಯದಲ್ಲಿ ಬೆಳೆಯುವ ರೈತರ ಉತ್ಪನ್ನಗಳನ್ನು ಯಾವ ರೀತಿ ಸಂಸ್ಕರಣೆ ಮಾಡಿದರೆ ವರ್ಷಪೂರ್ತಿ ಬಳಕೆ ಮಾಡಲು ಸಾಧ್ಯ ಎನ್ನುವ ಮಾಹಿತಿಯನ್ನು ಪಡೆದಿರುವ ಮಾಜಿ ಸಚಿವರು ತುಮಕೂರು ಜಿಲ್ಲೆಯನ್ನು ಸಹ ಇಂತಹ ಉತ್ತಮ ಎಪಿಎಂಸಿ ಮಾರುಕಟ್ಟೆ ಹಾಗೂ ಸಂಸ್ಕರಣಾ ಘಟಕಗಳನ್ನು ಕಾರ್ಯಚಟುವಟಿಕೆಗಳ ಬಗ್ಗೆ ಮುಂದಿನ ದಿನದಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದು.

ಅದರ ಪೂರ್ವಭಾವಿಯಾಗಿ ಗುಜರಾತಿನ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿದ್ದು ಅಲ್ಲಿ ರೈತರು ಮಾರುಕಟ್ಟೆಗೆ ತರುವ ತರಕಾರಿಗಳನ್ನು ಹಾಗೂ ಉತ್ಪನ್ನಗಳನ್ನು ಯಾವ ಮಾರ್ಗದಲ್ಲಿ ಸಂಸ್ಕರಣೆ ಮಾಡಲಿದ್ದಾರೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದರು.

 

ವರದಿ_ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version