ಆಟೋ ಮೇಲೆ ಮರ ಬಿದ್ದು ಗಾಯಗೊಂಡ ಚಾಲಕನನ್ನ ಭೇಟಿ ಮಾಡಿದ ಮಾಜಿ ಸಚಿವ ಸೊಗಡು ಶಿವಣ್ಣ.

ಆಟೋ ಮೇಲೆ ಮರ ಬಿದ್ದು ಗಾಯಗೊಂಡ ಚಾಲಕನನ್ನ ಭೇಟಿ ಮಾಡಿದ ಮಾಜಿ ಸಚಿವ ಸೊಗಡು ಶಿವಣ್ಣ.

 

ತುಮಕೂರು_ಕಳೆದ ಸೋಮವಾರ ತುಮಕೂರಿನಲ್ಲಿ ಸುರಿದ ಭಾರಿ ಮಳೆಗೆ ಕ್ಯಾತ್ಸಂದ್ರ ಸರ್ವಿಸ್ ರಸ್ತೆಯ ಗೋಕುಲ ಬಡಾವಣೆ ರೈಲ್ವೆ ಗೇಟ್ ಹತ್ತಿರ ಚಲಿಸುತ್ತಿದ್ದ ಆಟೋ ಮೇಲೆ ಬಾರಿ ಗಾತ್ರದ ಮರದ ರಂಬೆ ಬಿದ್ದು ಭಾರತಿ ನಗರದ ಆಟೋ ಚಾಲಕನಾದ ಮೋಹನ್ ಕುಮಾರ್ ರವರಿಗೆ ಗಂಭೀರ ಗಾಯವಾಗಿದ್ದು ಘಟನೆಯಲ್ಲಿ ಆಟೋ ಚಾಲಕನ ಬೆನ್ನು ಮೂಳೆ ಮುರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ ಪ್ರಾಣಪಯವಾಗದೆ ಪಾರಾಗಿದ್ದಾರೆ.

 

ಆದರೆ ಘಟನೆಯಲ್ಲಿ ಗಾಯಗೊಂಡ ಆಟೋ ಚಾಲಕ ಹಲಗೂ ವರ್ಷದಿಂದ ಸಮಾಜ ಸೇವೆ ಮಾಡುತ್ತಿದ್ದು ಘಟನೆಯಿಂದ ಆಟೋ ಸಂಪೂರ್ಣ ಜಖಂಗೊಂಡಿದ್ದು ಆಟೋ ಚಾಲಕನ ಜೀವನ ಅತಂತ್ರ ಸ್ಥಿತಿಯಲ್ಲಿದ್ದ ಕಾರಣ ಇಂದು ಮಾಜಿ ಸಚಿವ ಸೊಗಡು ಶಿವಣ್ಣ ಮಾಹಿತಿ ತಿಳಿದು ಕೂಡಲೇ ಆಟೋ ಚಾಲಕ ಮೋಹನ್ ಕುಮಾರ್ ರವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ.

 

ಇದೇ ಸಂದರ್ಭದಲ್ಲಿ ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚಿಸಿ ದ ಅವರು ತುಮಕೂರು ತಾಸಿಲ್ದಾರ್ ರವರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿ ಪ್ರಕೃತಿ ವಿಕೋಪದಡಿ ಇಂದ ಘಟನೆ ಜರುಗಿದ್ದು ಆಟೋ ಚಾಲಕನಿಗೆ ಜಿಲ್ಲಾಡಳಿತದಿಂದ ಪರಿಹಾರ ಒದಗಿಸಿ ಕೊಡುವಂತೆ ತಹಶೀಲ್ದಾರ್ ರವರಿಗೆ ತಿಳಿಸಿದರು. ಇನ್ನು ಘಟನೆಯ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version