ಎಐಸಿಸಿ ಇಂದ ಶುಕ್ರವಾರ ನಿಗದಿಯಾಗಿದ್ದ ಮಂಗಳೂರು ಸಭೆ ರದ್ದು.

ಎಐಸಿಸಿ ಇಂದ ಶುಕ್ರವಾರ ನಿಗದಿಯಾಗಿದ್ದ ಮಂಗಳೂರು ಸಭೆ ರದ್ದು.

ಕೇಂದ್ರದ ಮಾಜಿ ಸಚಿವರು ಹಾಗೂ ಕಾಂಗ್ರೆಸ್ ನ ಹಿರಿಯ ಮುಖಂಡರಾದ ಆಸ್ಕರ್ ಫರ್ನಾಂಡಿಸ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಂದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಂಗಳೂರಿನಲ್ಲಿ ಶುಕ್ರವಾರ ನಡೆಸಬೇಕಿದ್ದ ಸಭೆಯನ್ನು ರದ್ದುಗೊಳಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಆದರೆ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ಹದಗೆಟ್ಟಿರುವುದರಿಂದ ಆರೋಗ್ಯ ವಿಚಾರಿಸಲು ಇಂದು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ಅವರು ಇಂದು ಸಂಜೆ ಮಂಗಳೂರಿಗೆ ತೆರಳಲಿದ್ದು

ಉಳಿದಂತೆ ತುಮಕೂರಿನಲ್ಲಿ ಜುಲೈ 24ರ ಶನಿವಾರ ನಿಗದಿಯಾಗಿರುವ ತುಮಕೂರು ಚಿಕ್ಕಬಳ್ಳಾಪುರ ಕೋಲಾರ ಚಿತ್ರದುರ್ಗ ದಾವಣಗೆರೆ ಭಾಗದ ಐದು ಜಿಲ್ಲೆಗಳ ಮುಖಂಡರ ಸಭೆ ನಿಗದಿಯಂತೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!