ರಾಜೀವ್‌ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ನೂತನ ರಾಜ್ಯಾಧ್ಯಕ್ಷ ಸಿ.ನಾರಾಯಣಸ್ವಾಮಿ ಅವರಿಗೆ ಅಭಿನಂದನೆ 

ರಾಜೀವ್‌ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ನೂತನ ರಾಜ್ಯಾಧ್ಯಕ್ಷ ಸಿ.ನಾರಾಯಣಸ್ವಾಮಿ ಅವರಿಗೆ ಅಭಿನಂದನೆ

ಕಾರಹಳ್ಳಿ ಗ್ರಾಪಂ ಸದಸ್ಯ ಜಯರಾಮು ಹಾಗೂ ಸಂಗಡಿಗರಿಂದ ಅಭಿನಂದನೆ

 

ದೇವನಹಳ್ಳಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ರಾಜೀವ್‌ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ನೂತನ ರಾಜ್ಯಾಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಅವರು ಆಯ್ಕೆಯಾಗಿರುವುದರಿಂದ ಅವರನ್ನು ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಕಾರ್ಯಕ್ರಮ ನಡೆಯಿತು.

 

ಪ್ರವಾಸಿ ಮಂದಿರದ ಆವರಣದಲ್ಲಿ ಮಾಜಿ ಸಂಸದ ಸಿ.ನಾರಾಯಣಸ್ವಾಮಿ ಅವರನ್ನು ದೇವನಹಳ್ಳಿ ತಾಲೂಕಿನ ಕುಂದಾಣ ಹೋಬಳಿಯ ಕಾರಹಳ್ಳಿ ಗ್ರಾಪಂ ಸದಸ್ಯ ಜಯರಾಮು ಹಾಗೂ ಸಂಗಡಿಗರು ಅಭಿನಂದಿಸಿದರು.

 

ಕಾರಹಳ್ಳಿ ಗ್ರಾಪಂ ಸದಸ್ಯ ಜಯರಾಮು ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿದ್ದು, ತಮ್ಮದೇ ಆದ ರೀತಿಯಲ್ಲಿ ರಾಜಕೀಯವಾಗಿ ಬೆಳೆದು ಬಂದ ಸಿ.ನಾರಾಯಣಸ್ವಾಮಿ ಅವರು ಪ್ರತಿ ಕಾರ್ಯಕರ್ತರಿಗೂ, ಮುಖಂಡರಿಗೂ ಮಾದರಿಯಾಗಿದ್ದಾರೆ. ಹಳ್ಳಿಯಿಂದ ಹಿಡಿದು ದಿಲ್ಲಿಯ ತನಕ ಹೆಸರು ಮಾಡಿದ್ದಾರೆ. ಪಂಚಾಯತ್ ರಾಜ್ ಸಂಘಟನೆಯಲ್ಲಿ ಇದೀಗ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡಿರುವುದು ಸಂತಸದ ವಿಷಯವಾಗಿದೆ ಎಂದರು.

 

ಇದೇ ಸಂದರ್ಭದಲ್ಲಿ ಕಾರಹಳ್ಳಿ ವಿಎಸ್‌ಎಸ್‌ಎನ್ ನಿರ್ದೇಶಕ ಶಶಿಕುಮಾರ್, ಮುಖಂಡರಾದ ಅಶೋಕ್, ಲಕ್ಷ್ಮೀನಾರಾಯಣ್(ಚಿಕ್ಕಣ್ಣ), ಜೋಸೇಫ್, ಎಂಪಿಸಿಎಸ್ ಮಾಜಿ ಅಧ್ಯಕ್ಷ ಅಶೋಕ್, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಅಭಿನಂದಿಸಿದರು.

 

ಈ ವೇಳೆ ಮಾಜಿ ಶಾಸಕರಾದ ವೆಂಕಟಸ್ವಾಮಿ, ಮುನಿನರಸಿಂಹಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್,ಬ್ಲಾಕ್ ಕಾಂಗ್ರೇಸ್ ಪ್ರಸನ್ನಕುಮಾರ್, ರಾಮಚಂದ್ರಪ್ಪ, ಕೋದಂಡರಾಮ್, ತೂಬಗೆರೆ ರಂಗಪ್ಪ, ಉಪಾಧ್ಯಕ್ಷ ವಿ.ಶಾಂತಕುಮಾರ್, ಪಕ್ಷದ ಹಿರಿಯ ಮುಖಂಡರಾದ ಸಿ.ಜಗನ್ನಾಥ್, ಕೆಸಿ.ಮಂಜುನಾಥ್, ಚಂದೇನಹಳ್ಳಿ, ಶ್ರೀನಿವಾಸ್,ಖಾದಿಬೋರ್ಡ್ ಮಾಜಿ ಅಧ್ಯಕ್ಷ ಲಕ್ಷ್ಮಣ್ ಮೂರ್ತಿ, ಲಕ್ಷ್ಮಣ್ ಗೌಡ, ಬುಳ್ಳಹಳ್ಳಿ ರಾಜಪ್ಪ,ಶ್ರೀರಾಮಪ್ಪ ಯುವ ಮುಖಂಡರಾದ,ಬೈಚಾಪುರ ರಾಜಣ್ಣ,ನರಗನಹಳ್ಳಿ ನಾಗೇಶ್, ಉಪಸ್ಥಿತಿ ಇದ್ದರು.

 

 

ಗುರುಮೂರ್ತಿ ಬೂದಿಗೆರೆ

8861100990

Leave a Reply

Your email address will not be published. Required fields are marked *

You cannot copy content of this page

error: Content is protected !!