ದಿಲ್ಲಿಗೆ ಹೋಗುವುದಿಲ್ಲ, ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಿಲ್ಲಿಗೆ ಹೋಗುವುದಿಲ್ಲ, ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

 

ಹುಬ್ಬಳ್ಳಿ:ಹೈಕಮಾಂಡ್‍ನಿಂದ ಹೊಸದಿಲ್ಲಿಗೆ ಬರುವಂತೆ ನನಗೆ ಯಾವುದೇ ಆಹ್ವಾನ ಬಂದಿಲ್ಲ. ಹೀಗಾಗಿ ನ.7ಕ್ಕೆ ನಾನು ಹೊಸದಿಲ್ಲಿಗೆ ತೆರಳುವುದಿಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಣೆ ನೀಡಿದ್ದಾರೆ.

 

ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಇಲ್ಲ’ ಎಂದು ಹೇಳಿದ್ದು, ಸಚಿವ ಸ್ಥಾನಾಕಾಂಕ್ಷಿ ಶಾಸಕರ ಆಸೆಗೆ ತಣ್ಣೀರು ಎರಚಿದ್ದಾರೆ. ಹೈಕಮಾಂಡ್‍ನಿಂದ ನನಗೆ ಯಾವುದೇ ಬುಲಾವ್ ಬಂದಿಲ್ಲ. ನಾನು ಹೊಸದಿಲ್ಲಿಗೆ ತೆರಳುವುದಿಲ್ಲ ಎಂದರು.

 

ರಾಜ್ಯ ಸರಕಾರ ನೂರು ದಿನದ ಅವಧಿ ಪೂರ್ಣಗೊಳಿಸಿದ್ದು ಮುಂದಿನ ದಿಕ್ಸೂಚಿ. ನೂರು ದಿನಗಳಲ್ಲಿ ಸರಕಾರ ಭದ್ರ ಮತ್ತು ಭರವಸೆಯ ಹೆಜ್ಜೆಯನ್ನಿಟ್ಟಿದೆ. ಮಾತ್ರವಲ್ಲ ಹಲವು ಮಹತ್ವದ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಜನರಿಗೆ ಹತ್ತಿರವಾಗಿದ್ದೇವೆ. ಕೋವಿಡ್ ಹಿನ್ನೆಲೆಯಲ್ಲಿ ಕುಸಿದಿದ್ದ ಆರ್ಥಿಕ ಸ್ಥಿತಿ ಸುಧಾರಿಸಲು ಕ್ರಮ ವಹಿಸಿದ್ದೇವೆ ಎಂದು ಬೊಮ್ಮಾಯಿ ತಿಳಿಸಿದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version