ರಮೇಶ್ ಜಾರಕಿಹೊಳಿ ಗೆ ಸಚಿವ ಸ್ಥಾನ ನೀಡುವಂತೆ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಆಗ್ರಹ .

 

 

ರಮೇಶ್ ಜಾರಕಿಹೊಳಿ ಗೆ ಸಚಿವ ಸ್ಥಾನ ನೀಡುವಂತೆ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಆಗ್ರಹ .

 

ರಾಜ್ಯದಲ್ಲಿ ಬಿಜೆಪಿ ಸರ್ಕಾರ ತರುವಲ್ಲಿ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಕೊಡುಗೆ ಅಪಾರವಾಗಿದ್ದು ಈ ವಿಷಯ ಇಡೀ ರಾಜ್ಯದ ಜನತೆಗೆ ಗೊತ್ತಿರುವಂಥದ್ದು ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ರವರ ಅಭಿವೃದ್ಧಿ ಹಾಗೂ ರಾಜಕೀಯ ಬೆಳವಣಿಗೆಯನ್ನು ಸಹಿಸಲಾಗದೆ ಪಿತೂರಿಯಿಂದ ಅವರ ಸಚಿವ ಸ್ಥಾನ ಕೈತಪ್ಪಿದೆ .

 

ಆದರೆ ಅವರು ಕ್ಷೇತ್ರದಲ್ಲಿ ಸಲ್ಲಿಸಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಮತದಾರರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುವಂತೆ ಹಲವು ಅಭಿವೃದ್ಧಿ ಕಾರ್ಯ ಕ್ಷೇತ್ರದಲ್ಲಿ ಮಾಡಿದ್ದಾರೆ.

ಇಂತಹ ಶ್ಕ್ರ್ದ್ಪಿ  ಶಾಸಕರ ವಿರುದ್ಧ ಪಿತೂರಿ ನಡೆಸಿದ್ದು ಎಲ್ಲರಿಗೂ ಗೊತ್ತಿರುವ ವಿಷಯವೇ ಮುಂದಿನ ದಿನಗಳಲ್ಲಿ ಅವರು ಆರೋಪ ಮುಕ್ತರಾಗಿ ಹೊರಬರುವ ವಿಶ್ವಾಸವಿದ್ದು ಆದ್ದರಿಂದ ಮುಖ್ಯಮಂತ್ರಿ ಯಡಿಯೂರಪ್ಪ ನವರು ಮತ್ತೆ ಅವರನ್ನು ಸಂಪುಟಕ್ಕೆ ಸೇರಿಸಿ ಮತ್ತೆ ಮಂತ್ರಿಯನ್ನಾಗಿ ಮಾಡಬೇಕು ಎಂದು ಗೋಕಾಕ್ ನಗರದ ಶ್ರೀ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!