ಜೆಡಿಎಸ್ ಗೆ ಗುಡ್ ಬೈ, ಕಾಂಗ್ರೆಸ್ ಗೆ ಜೈ ಎಂದ ಬೆಮೆಲ್ ಕಾಂತರಾಜು… ಕಾಂಗ್ರೆಸ್ ಸೇರ್ಪಡೆಗೆ ಡೇಟ್ ಫಿಕ್ಸ್…

ಜೆಡಿಎಸ್ ಗೆ ಗುಡ್ ಬೈ, ಕಾಂಗ್ರೆಸ್ ಗೆ ಜೈ ಎಂದ ಬೆಮೆಲ್ ಕಾಂತರಾಜು… ಕಾಂಗ್ರೆಸ್ ಸೇರ್ಪಡೆಗೆ ಡೇಟ್ ಫಿಕ್ಸ್…

 

ಬೆಂಗಳೂರು: ಮಾಜಿ ವಿಧಾನಪರಿಷತ್ ಸದಸ್ಯರಾದ ಬೆಮೆಲ್ ಕಾಂತರಾಜು ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಮುಂದಾಗಿದ್ದು, ಕಾಂಗ್ರೆಸ್ ಸೇರ್ಪಡೆಗೆ ಡೇಟ್ ಫಿಕ್ಸ್ ಆಗಿದೆ.

 

ಜೆಡಿಎಸ್ ನಿಂದ ಎಂಎಲ್ ಸಿ ಆಗಿದ್ದ ಕಾಂತರಾಜು ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಪಕ್ಷ ಸೇರ್ಪಡೆ ಕುರಿತು ಅವರೊಂದಿಗೆ ಚರ್ಚಿಸಿದರು. ನೆಲಮಂಗಲದ ಬೆಮೆಲ್ ಕೃಷ್ಣಪ್ಪ ಅವರ ಪುತ್ರರಾದ ಕಾಂತರಾಜು ಅವರು ತುರುವೇಕೆರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಸಹ ಆಗಿದ್ದಾರೆ.

 

ಕಾಂತರಾಜು ಅವರು ಕೆಪಿಸಿಸಿ ಕಚೇರಿಯಲ್ಲಿ ಜನವರಿ 21ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಕಾಂತರಾಜು ಅವರು ಹಲವು ದಿನಗಳಿಂದ ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡಿದ್ದರು. ಕಾಂಗ್ರೆಸ್ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿರುವ ಅವರು ಹೆಚ್. ಡಿ. ಕುಮಾರಸ್ವಾಮಿ ಗೂ ನನಗೂ ಸ್ವಲ್ಪ ಮನಸ್ತಾಪ ಇತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದೇನೆ. ಕಾಂಗ್ರೆಸ್ ಪಕ್ಷದ ಸಿದ್ದಾಂತಗಳನ್ನು ನಂಬಿ ನಾನು ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.

 

ವರದಿ_ಮಾರುತಿ ಪ್ರಸಾದ್ ತುಮಕೂರು.

Leave a Reply

Your email address will not be published. Required fields are marked *

You cannot copy content of this page

error: Content is protected !!