ಕುಡಿಯುವ ನೀರಿನ ಬವಣೆ ನೀಗಿಸಲು ಮುಂದಾದ ಪತ್ರಕರ್ತರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಲೋಕೇಶ್.

ಕುಡಿಯುವ ನೀರಿನ ಬವಣೆ ನೀಗಿಸಲು ಮುಂದಾದ ಪತ್ರಕರ್ತರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಲೋಕೇಶ್.

 

ಶಿರಾ ತಾಲ್ಲೂಕು ಬರಗೂರು ಗ್ರಾಮ ಪಂಚಾಯಿತಿಯ ಹಾರೋಗೆರೆ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾಗಿರುವ ಲೋಕೇಶ್ ರವರು.

ಹಾರೋಗೆರೆ ಗ್ರಾಮದಲ್ಲಿ ಸುಮಾರು ದಿನಗಳಿಂದ ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುತ್ತಿದ್ದ ನೀರಿನ ಪೈಪ್ ಒಡೆದು ಸಾರ್ವಜನಿಕರಿಗೆ ನೀರಿನ ತೊಂದರೆ ಉಂಟಾಗಿತ್ತು ಇದನ್ನು ಗಮನಿಸಿರುವ ಲೋಕೇಶ್ ರವರ ತಮ್ಮ ಸ್ವಂತ ಖರ್ಚಿನಿಂದ ಹಾಗೂ ಸಾರ್ವಜನಿಕರ ಸಹಕಾರದಿಂದ ಖುದ್ದಾಗಿ ತಾವೇ ನೀರಿನ ಪೈಪ್ ಸರಿಪಡಿಸಿ. ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.

 

 

ಸಾರ್ವಜನಿಕರಿಗೆ ಸ್ಪಂದಿಸಬೇಕಾಗಿದ್ದ ಸದಸ್ಯರು ಅಧಿಕಾರದ ಆಸೆಗಾಗಿ ಪ್ರವಾಸದಲ್ಲಿರುವ ಸಂದರ್ಭದಲ್ಲಿ ಆಸೆ-ಆಕಾಂಕ್ಷೆಗಳಿಗೆ ಬಲಿಯಾಗದೆ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮುಂದಾಗಿರುವ ಗ್ರಾಮ ಪಂಚಾಯತ್ ಸದಸ್ಯರಾದ ಲೋಕೇಶ್ ರವರಿಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

 

ಇನ್ನು ವಿಜಯ ಭಾರತ ಬಳಗದೊಂದಿಗೆ ಮಾತನಾಡಿರುವ ಲೋಕೇಶ್ ರವರು ಮಾದರಿ ಗ್ರಾಮವನ್ನಾಗಿ ಮಾಡಬೇಕೆಂದು ನನ್ನ ಹಲವು ದಿನಗಳ ಕನಸಾಗಿದ್ದು ಅದನ್ನ ಮಾಡುವ ನಿಟ್ಟಿನಲ್ಲಿ ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಒದಗಿಸಲು ಸಹಕರಿಸಿ ಮುಂದಿನ ದಿನಗಳಲ್ಲಿ ಮಾದರಿ ಕ್ಷೇತ್ರವನ್ನಾಗಿ ಬದಲಾಯಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ

Leave a Reply

Your email address will not be published. Required fields are marked *

You cannot copy content of this page

error: Content is protected !!