ಕೋವಿಡ್ ಸಂದರ್ಭದಲ್ಲಿನ ಅಕ್ರಮಗಳ ಬಗ್ಗೆ ಸರ್ಕಾರ ತನಿಖೆ ನಡೆಸುತ್ತದೆ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್.

ಕೋವಿಡ್ ಸಂದರ್ಭದಲ್ಲಿನ ಅಕ್ರಮಗಳ ಬಗ್ಗೆ ಸರ್ಕಾರ ತನಿಖೆ ನಡೆಸುತ್ತದೆ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್.

 

 

ತುಮಕೂರು – ಕೋವಿದ್ ಸಂದರ್ಭದಲ್ಲಿ ರಾಜ್ಯವನ್ನು ಹೆಚ್ಚಾಗಿ ಕಾಡಿದ  ಸಂದರ್ಭದಲ್ಲಿ ಅಂದು ಆಡಳಿತ ನಡೆಸುತ್ತಿದ್ದ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಹಲವು ಅಕ್ರಮಗಳು ನಡೆದಿದ್ದು ಅದರ ಬಗ್ಗೆ ಕಾಂಗ್ರೆಸ್ ಸರ್ಕಾರ ತನಿಖೆ ನಡೆಸುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

 

 

 

 

ತುಮಕೂರಿನ ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಓ ಪಿ ಡಿ ಬ್ಲಾಕ್ ಗಳ ನೂತನ ಘಟಕಗಳು ,ಸ್ಕೈ ಕೈವಾಕ್ ಉದ್ಘಾಟನೆ ಮಾಡಿದ ಆರೋಗ್ಯ ಸಚಿವರು ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ್ದು ಕೋವಿಡ್ ಸಂದರ್ಭದಲ್ಲಿ ಹಲವು ಪೀಠೋಪಕರಣಗಳು, ಔಷಧಿಗಳು ಖರೀದಿಗೆ ಸಂಬಂಧಿಸಿದಂತೆ  ಹಲವು ಅಕ್ರಮಗಳ ಬಗ್ಗೆ ಆರೋಪ ಕೇಳಿ ಬಂದಿದ್ದು ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

 

 

ಇನ್ನು ಕಾಂಗ್ರೆಸ್ ಸರ್ಕಾರ ಯಾವುದೇ ದ್ವೇಷದ ರಾಜಕಾರಣ ಮಾಡುತ್ತಿಲ್ಲ  ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತಿದೆ ಎಂದ ಅವರು ಅಕ್ರಮಗಳ ಬಗ್ಗೆ ಈಗಾಗಲೇ ಪಬ್ಲಿಕ್ ಅಕೌಂಟ್ಸ್ ಕಮಿಟಿ ವರದಿಯು ಸಹ ಕ್ರಮಗಳು ನಡೆದಿದೆ ಎನ್ನುವ ಬಗ್ಗೆ ಮಾಹಿತಿ ನೀಡಿದ್ದು ನಿರ್ದಿಷ್ಟ ತನಿಖೆಯ ಅವಶ್ಯಕತೆ ಇದೆ ಹಾಗಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version