ಗುಬ್ಬಿ ತಾಲೂಕಿನ ಮಠದ ಹಳ್ಳ ಯೋಜನೆಯ ಬಗ್ಗೆ ಸದನದ ಗಮನ ಸೆಳೆದ ಗುಬ್ಬಿ ಶಾಸಕ ಶ್ರೀನಿವಾಸ್

 

ಗುಬ್ಬಿ ತಾಲೂಕಿನ ಹಾಗಲವಾಡಿ ಹೋಬಳಿಯ ಗ್ರಾಮಗಳಿಗೆ ಬಹು ಗ್ರಾಮಗಳ ಕುಡಿಯುವ ನೀರು ಒದಗಿಸುವ ‘ಮಠದ ಹಳ್ಳ’ ಯೋಜನೆಗೆ ನಾನು ಮಂತ್ರಿಯಾಗಿದ್ದ ಸಂದರ್ಭದಲ್ಲಿ 2019ರ ಮೈತ್ರಿ ಸರ್ಕಾರದಲ್ಲಿ 25.56 ಕೋಟಿ ರೂಪಾಯಿಗಳ ಆಡಳಿತಾತ್ಮಕ ಅನುಮೋದನೆ ದೊರಕಿ ಟೆಂಡರ್ ಆದ ನಂತರವೂ ಇದೀಗ ರಾಜ್ಯ ಬಿಜೆಪಿ ಸರ್ಕಾರ ಈ ಯೋಜನೆಯನ್ನು ಸ್ಥಗಿತಗೊಳಿಸಿ ಗುಬ್ಬಿ ತಾಲೂಕಿನ ಜನತೆಗೆ ಅನ್ಯಾಯ ಆಗಿದೆ . ಸರ್ಕಾರ ಕೂಡಲೇ ಕ್ರಮವಹಿಸಿ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕಾಗಿದೆ ಹಾಗಾಗಿ ಮುಂಬರುವ ದಿನಗಳಲ್ಲಿ ಆದಷ್ಟು ಬೇಗ ಈ ಸಮಸ್ಯೆ ಬಗೆಹರಿಸುವಲ್ಲಿ ಗಮನಹರಿಸಬೇಕು ಎಂದು ಸದನದಲ್ಲಿ ಸರ್ಕಾರ ಹಾಗೂ ಸಂಬಂಧಪಟ್ಟ ಸಚಿವರು ಹಾಗೂ ಸಭಾಧ್ಯಕ್ಷರ ಗಮನ ಸೆಳೆದ ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್.

Leave a Reply

Your email address will not be published. Required fields are marked *

You cannot copy content of this page

error: Content is protected !!