ಕೈ ಬಿಟ್ಟು   ತೆನೆ ಹೊರಲಿದ್ದಾರಾ ಶಫಿ ಅಹಮದ್….?

ಕೈ ಬಿಟ್ಟು   ತೆನೆ ಹೊರಲಿದ್ದಾರಾ ಶಫಿ ಅಹಮದ್….?

 

 

 

ತುಮಕೂರು: ಮಹತ್ತರ ಬೆಳವಣಿಗೆಯೊಂದರಲ್ಲಿ ತುಮಕೂರು ನಗರದ ಮಾಜಿ ಶಾಸಕ ಶಫಿ ಅಹಮದ್ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದು, ಜೆಡಿಎಸ್ ಪಕ್ಷ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತಗೊಂಡಿದೆ.

 

 

 

 

 

 

ಈ ಬಾರಿಯ ಚುನಾವಣೆಯಲ್ಲಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ತಮ್ಮ ಅಳಿಯ ಡಾ. ರಫೀಕ್ ಅಹಮದ್ ರವರಿಗೆ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಶಫಿ ಅಹಮದ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ, ತಮ್ಮ ಆಕ್ರೋಶ ಹೊರಹಾಕಿದ್ದರು.

 

 

 

 

 

 

ಬಳಿಕ ಪಕ್ಷದ ವರಿಷ್ಠರು ಮನವೊಲಿಸುವ ತಂತ್ರಗಳನ್ನು ನಡೆಸಿದ್ದರ ಪರಿಣಾಮ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದ್ ರವರಿಗೆ ಬೆಂಬಲ ಸೂಚಿಸಿದ್ದರು. ನಂತರದ ದಿನಗಳಲ್ಲಿ ಹಲವಾರು ಬೆಳವಣಿಗೆಗಳು ನಡೆದಿದ್ದು, ಶಫಿ ಅಹಮದ್ ನಿವಾಸಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಭೇಟಿ ನೀಡಿ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿರುವುದು ಶಫಿ ಅಹಮದ್ ಜೆಡಿಎಸ್ ಸೇರ್ಪಡೆಯಾಗುವುದಕ್ಕೆ ಇಂಬು ನೀಡಿದಂತಾಗಿದೆ.

 

 

 

 

 

ಏ.27 ರಂದು ತುಮಕೂರಿಗೆ ಮಾಜಿ ಸಿ.ಎಂ. ಹೆಚ್.ಡಿ.ಕುಮಾರಸ್ವಾಮಿ ಆಗಮಿಸುತ್ತಿದ್ದು ಅವರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಶಫಿ ಅಹಮದ್ ಜೆಡಿಎಸ್ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version