ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಗೃಹಸಚಿವ ಅರಗ ಜ್ಞಾನೆಂದ್ರ ನೇಮಕ 

ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಗೃಹಸಚಿವ ಅರಗ ಜ್ಞಾನೆಂದ್ರ ನೇಮಕ 

 

 

ತುಮಕೂರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ಮಾಧುಸ್ವಾಮಿ ಅವರ ದಿಢೀರ್ ಬದಲಾವಣೆ ಮಾಡಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರನ್ನು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಮುಖ್ಯಮಂತ್ರಿ ಬೊಮ್ಮಾಯಿ ಆದೇಶ ಮಾಡಿದ್ದಾರೆ.

 

 

ಇನ್ನು ದಿಡೀರ್ ಎಂಬಂತೆ ಉಸ್ತುವಾರಿ ಸಚಿವರನ್ನು ಬದಲಾವಣೆಯ ಮಾಡಿರುವುದಕ್ಕೆ ತೀವ್ರ ಸಂಚಲನ ಸೃಷ್ಟಿಯಾಗಿದೆ ಇನ್ನು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಮಾಧುಸ್ವಾಮಿ ಅವರ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದರು ಆದರೆ ಅವರನ್ನು ಬದಲಾವಣೆ ಮಾಡಿ ‍ ಆದೇಶ ಮಾಡಿದೆ.

 

 

ಇನ್ನೂ ದಿಡೀರ್ ಮಾಧುಸ್ವಾಮಿ ಅವರನ್ನು ಬದಲಾವಣೆ ಮಾಡಿ ತುಮಕೂರು ಜಿಲ್ಲೆಗೆ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರನ್ನು ನೇಮಕ ಮಾಡಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

 

 

ಇನ್ನು ಮಾಧುಸ್ವಾಮಿ ರವರ ನಡೆಗೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಯಿತಾ ಎನ್ನುವ ಅನುಮಾನ ಕೂಡ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

 

 

ರಾಜ್ಯಾದ್ಯಂತ ಹಲವು ಸಚಿವರನ್ನು ಬದಲಾವಣೆ ಮಾಡಿ ಇನ್ನು ಜೆ ಸಿ ಮಾಧುಸ್ವಾಮಿ  ರವರಿಗೆ ಯಾವುದೇ ಜಿಲ್ಲೆಯ ಉಸ್ತುವಾರಿ ನೀಡದೇ ಇರುವುದು ಯಾವ ಕಾರಣಕ್ಕೆ ಎಂಬುದು ನಿಗೂಢವಾಗಿದೆ.

 

31 ಜಿಲ್ಲೆಗಳಿಗೆ 28 ಜಿಲ್ಲಾ ಉಸ್ತುವಾರಿ ಸಚಿವರನ್ನು ಮಡಿ ಮಾಡಿ ಸರ್ಕಾರ ಆದೇಶಿಸಿದೆ .

 

 

 

ಇನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರ ಸಂಪುಟದಲ್ಲಿರುವ ಸಚಿವರನ್ನ ಹಲವರನ್ನು ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನಾಗಿ ಬದಲಾವಣೆ ಮಾಡುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಹಲವು ಸಚಿವರಿಗೆ ದಿಡೀರ್ ಶಾಕ್ ಒಂದನ್ನ ಮುಖ್ಯಮಂತ್ರಿಯ ಬೊಮ್ಮಾಯಿ ಅವರು ನೀಡಿದ್ದಾರೆ.

 

 

ವರದಿ _ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!