ಅಮಾನವೀಯ ಘಟನೆ ಬೆಳಕಿಗೆ ಡೆಪಾಸಿಟ್ ಹಣ ಪಡೆಯಲು ಬಾಲಕಿಗೆ ಇಸ್ತ್ರಿ ಪೆಟ್ಟಿಗೆ ಯಲ್ಲಿ ಸುಟ್ಟ ದೊಡ್ಡಮ್ಮ.

ಅಮಾನವೀಯ ಘಟನೆ ಬೆಳಕಿಗೆ ಡೆಪಾಸಿಟ್ ಹಣ ಪಡೆಯಲು ಬಾಲಕಿಗೆ ಇಸ್ತ್ರಿ ಪೆಟ್ಟಿಗೆ ಯಲ್ಲಿ ಸುಟ್ಟ ದೊಡ್ಡಮ್ಮ.

 

 

 

 

ತುಮಕೂರು: ಬ್ಯಾಂಕ್ನಲ್ಲಿದ್ದ ಡೆಪಾಸಿಟ್ ಹಣಕ್ಕಾಗಿ ದೊಡ್ಡಮ್ಮ ಇಸ್ತ್ರಿ ಪೆಟ್ಟಿಗೆಯಿಂದ ಐದನೇ ತರಗತಿಯಲ್ಲಿ ಓದುತ್ತಿದ್ದ ಮಗಳ ತೊಡೆ ಸುಟ್ಟಿರುವ ಘಟನೆ ನಡೆದಿದೆ ಘಟನೆ ಆಂಧ್ರ ಪ್ರದೇಶದ ಮಡಕಶಿರಾ ತಾಲೂಕಿನ ನಿದ್ರಘಟ್ಟೆ   ಗ್ರಾಮದಲ್ಲಿ ನಡೆದಿದೆ.

 

 

 

ಮಧುಗಿರಿ ತಾಲೂಕಿನ ಪೂಜಾರಹಳ್ಳಿ ಗ್ರಾಮದ ನಿವಾಸಿಯಾಗಿರುವ ಬಾಲಕಿ ಲಕ್ಷ್ಮೀಗೆ ದೊಡ್ಡಮ್ಮ ನರಸಮ್ಮ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.

 

 

 

 

ಈ ನಡುವೆ ಲಕ್ಷ್ಮಿ ಎಂಬ ಬಾಲಕಿಯ ತಾಯಿ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದರು. ತನ್ನ ಮಗಳಿಗಾಗಿ ತಾಯಿ 4 ಲಕ್ಷ ಹಣ ಡಿಪಾಸಿಟ್ ಮಾಡಿದ್ದರು. ಈ ಹಣವನ್ನು ಲಪಟಾಯಿಸಲು ಬಾಲಕಿಗೆ ದೊಡ್ಡಮ್ಮ . ಹಣಕ್ಕಾಗಿ ಬಾಲಕಿಯ ತೊಡೆಯನ್ನು ಇಸ್ತ್ರಿಪೆಟ್ಟಿಗೆಯಿಂದ ಸುಟ್ಟು ಚಿತ್ರಹಿಂಸೆ ನೀಡಿದ್ದಾಳೆ ಎನ್ನಲಾಗಿದೆ.

 

 

 

 

 

ಇನ್ನು ಬಾಲಕಿ ಲಕ್ಷ್ಮೀ ಐದನೇ ತರಗತಿ ಓದುತ್ತಿದ್ದಾಳೆ. ಆಕೆಯ ಪರೀಕ್ಷೆ ನಡೆಯುತ್ತಿದ್ದು, ಸೋಮವಾರ ಪರೀಕ್ಷೆಗೆ ಹಾಜರಾಗಿರಲಿಲ್ಲ. ಹೀಗಾಗಿ ಶಿಕ್ಷಕರು ಮತ್ತು ಸಂಬಂಧಿಕರು ಬಾಲಕಿಯನ್ನು ಊರಿಗೆ ಕರೆಸಿ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ.

 

 

 

ಘಟನೆ ಸಂಭಂದ ಬಡವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version