ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಕ್ಬಾಲ್ ಅಹಮದ್ ಘೋಷಣೆ ಮುಖಂಡರಿಗೆ ಅಭಿನಂದನೆ ಸಲ್ಲಿಸಿದ ಅಭ್ಯರ್ಥಿ

ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಕ್ಬಾಲ್ ಅಹಮದ್ ಘೋಷಣೆ ಮುಖಂಡರಿಗೆ ಅಭಿನಂದನೆ ಸಲ್ಲಿಸಿದ ಅಭ್ಯರ್ಥಿ

 

 

ಟಿಕೆಟ್ ನೀಡಿದ ಎಐಸಿಸಿ ಮುಖಂಡರು, ಕೆಪಿಸಿಸಿ ಅಧ್ಯಕ್ಷರು ಆದ ಡಿ. ಕೆ ಶಿವಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್, ಸಿದ್ದರಾಮಯ್ಯ ಸಲಿo ಆಹಮ್ಮದ್ ಹಾಗೂ ಜಿಲ್ಲೆಯ ಎಲ್ಲಾ ನಾಯಕರಿಗೆ ಅಭಿನಂದನೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದ್.

 

 

 

ಇನ್ನು ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ವಿಜಯ ಭಾರತ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿರುವ ಅಭ್ಯರ್ಥಿ ಇಕ್ಬಾಲ್ ಅಹಮದ್ ರವರು ಇದು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಸಂದ ಜಯ ಜಿಲ್ಲೆಯ ಎಲ್ಲಾ ಹಿರಿಯ ಮುಖಂಡರು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣಾ ಪ್ರಚಾರ ಆರಂಭ ಮಾಡುವೆ ಎಂದ ಇಕ್ಬಾಲ್ ಅಹಮದ್.

 

 

ಇನ್ನು ತುಮಕೂರು ಜಿಲ್ಲಾ ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲ ಇಲ್ಲ ಜಿಲ್ಲೆಯ ಎಲ್ಲಾ ಮುಖಂಡರೊಂದಿಗೆ ಮಾತುಕತೆ ನಡೆಸಿ ಎಲ್ಲರೊಂದಿಗೆ ಒಟ್ಟಿಗೂಡಿ ಚುನಾವಣಾ ಪ್ರಚಾರ ಆರಂಭಿಸಲಾಗುವುದು ಎಂದಿದ್ದಾರೆ.

 

ಇನ್ನು ಟಿಕೆಟ್ ಕಾಗೆ ನಾನು ಯಾವುದೇ ಲಾಬಿ ನಡೆಸಿಲ್ಲ ಹಾಗೂ ಯಾವುದೇ ಒತ್ತಡ ತಂದಿಲ್ಲ ಆದರೆ ಪಕ್ಷ ತನ್ನ ಕೆಲಸವನ್ನ ಗುರುತಿಸಿ ಟಿಕೆಟ್ ನೀಡಿರುವುದಕ್ಕೆ ಸಂತಸವಾಗಿದೆ ಎಂದರು.

 

ವರದಿ – ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version