ಅಕಾಲಿಕ ಮಳೆ ಸಂತ್ರಸ್ತರಿಗೆ ದಿನಸಿ ಕಿಟ್ ವಿತರಿಸಿದ _ಪಾವಗಡದ ರಾಮಕೃಷ್ಣ ಆಶ್ರಮದ ಜಪಾನಂದ ಶ್ರೀಗಳು.

ಅಕಾಲಿಕ ಮಳೆ ಸಂತ್ರಸ್ತರಿಗೆ ದಿನಸಿ ಕಿಟ್ ವಿತರಿಸಿದ _ಪಾವಗಡದ ರಾಮಕೃಷ್ಣ ಆಶ್ರಮದ ಜಪಾನಂದ ಶ್ರೀಗಳು.

 

ತುಮಕೂರು_ಅಕಾಲಿಕ ಮಳೆಯಿಂದ ತುಮಕೂರುಸಂಕಷ್ಟಕ್ಕೆ ಈಡಾದ ಕೂಲಿ ಹಾಗೂ ಬಡಕುಟುಂಬಗಳ ಗುಡಿಸಲುಗಳಿಗೆ ಭೇಟಿ ನೀಡಿದ ಪಾವಗಡದ ರಾಮಕೃಷ್ಣ ಆಶ್ರಮದ ಜಪಾನಂದ ಶ್ರೀಗಳು ಸಂಕಷ್ಟದಲ್ಲಿರುವ ನೂರಕ್ಕೂ ಹೆಚ್ಚು ಕುಟುಂಬಗಳಿಗೆ ದಿನಸಿ ಕಿಟ್ ಹಾಗೂ ಟಾರ್ಪಲ್ ಗಳನ್ನು ವಿತರಿಸಿದರು.

 

ತುಮಕೂರಿನ ಬಡ್ಡಿಹಳ್ಳಿ ಬಳಿ ರಾಯಚೂರು ಮೂಲದ ಕೂಲಿ ಕಾರ್ಮಿಕರು ಗುಡಿಸಲುಗಳನ್ನು ನಿರ್ಮಿಸಿಕೊಂಡು ವಾಸಮಾಡುತ್ತಿದ್ದರು ಆದರೆ ಕಳೆದ ನಾಲ್ಕೈದು ದಿನಗಳಿಂದ ಸುರಿದ ಭಾರೀ ಮಳೆಗೆ ಜೋಪಡಿಗಳಲ್ಲಿ ವಾಸವಿದ್ದ ಗುಡಿಸಲುಗಳಿಗೆ ನೀರು ನುಗ್ಗಿ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಈಡಾಗಿದ್ದವು .

 

 

 

ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪತ್ರಿಕೆಗಳು ಈ ಬಗ್ಗೆ ವರದಿ ಪ್ರಸಾರ ಮಾಡಿದವು ಅದನ್ನರಿತ ಕೂಡಲೇ ಪಾವಗಡದಿಂದ ತುಮಕೂರಿಗೆ ಆಗಮಿಸಿದ ಶ್ರೀಗಳು ನೂರಕ್ಕೂ ಹೆಚ್ಚು ಕುಟುಂಬಗಳಿಗೆ ಪಾವಗಡದ ರಾಮಕೃಷ್ಣ ಸೇವಾಶ್ರಮ ,ಇನ್ಫೋಸಿಸ್ ಫೌಂಡೇಶನ್ ಹಾಗೂ ರೆಡ್ ಕ್ರಾಸ್ ವತಿಯಿಂದ ಟಾರ್ಪಲ್ ಹಾಗೂ ಒಂದು ತಿಂಗಳಿಗೆ ಬೇಕಾಗುವ ದಿನಸಿ ಕಿಟ್ ಗಳನ್ನು ಶ್ರೀಗಳು ವಿತರಿಸಿದರು.

 

 

 

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೂಲಿಗಾಗಿ ಅರಸಿ ನಗರ ಪ್ರದೇಶಗಳಿಗೆ ಉತ್ತರ ಕರ್ನಾಟಕ ಮೂಲದ ಹಲವು ಕುಟುಂಬಗಳು ತುಮಕೂರು, ಬೆಂಗಳೂರಿನಂತಹ ನಗರ ಪ್ರದೇಶಗಳಿಗೆ ಕೂಲಿ ಅರಸಿ ಬಂದಿದ್ದು ಇಂತಹ ಬಡ ಕುಟುಂಬಗಳು ಅಕಾಲಿಕ ಮಳೆಯಿಂದ ಸಂಕಷ್ಟಕ್ಕೀಡಾಗಿದ್ದು ನಿಜಕ್ಕೂ ನೋವಿನ ಸಂಗತಿ ಹಾಗಾಗಿ ಅಂಥವರ ಗುಡಿಸಲುಗಳಿಗೆ ಭೇಟಿ ನೀಡಿದ ಅವರು ಇಂತಹ ಬಡ ಕುಟುಂಬಗಳಿಗೆ ಸಂಕಷ್ಟದಲ್ಲಿ ನೆರವಾಗುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದರು .

 

 

ಇದೇ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ನ ರಾಷ್ಟ್ರೀಯ ಮಂಡಳಿ ಸದಸ್ಯರು ಹಾಗೂ  ತುಮಕೂರು ರೆಡ್ ಕ್ರಾಸ್ ನ ಚೇರ್ಮನ್  ನಾಗಣ್ಣ, ಡಾ. ಟಿ.ಅರ್ ಲೀಲಾವತಿ   ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಚಿ.ನಿ ಪುರುಷೋತ್ತಮ್ ಸೇರಿದಂತೆ ಹಲವರು ಹಾಜರಿದ್ದರು.

 

ವರದಿ_ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!