ತುಮಕೂರು ನಗರ ಜೆಡಿಎಸ್ ಗೆ ಮಾಸ್ಟರ್ ಸ್ಟ್ರೋಕ್ ಕೊಟ್ಟ ಜೆಡಿಎಸ್ ಮುಖಂಡ ನರಸೇಗೌಡ…..???

ತುಮಕೂರು ನಗರ ಜೆಡಿಎಸ್ ಗೆ ಮಾಸ್ಟರ್ ಸ್ಟ್ರೋಕ್ ಕೊಟ್ಟ ಜೆಡಿಎಸ್ ಮುಖಂಡ ನರಸೇಗೌಡ…..???

 

 

ತುಮಕೂರು – ಇದುವರೆಗೂ ತುಮಕೂರು ಜಿಲ್ಲಾ ಜೆಡಿಎಸ್ ನಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ, ಮುಖಂಡರಾಗಿ ಇದುವರೆಗೂ ಪಕ್ಷಕ್ಕಾಗಿ ಹಗಲಿರುಳು ಸೇವೆ ಸಲ್ಲಿಸಿ, ಪಕ್ಷವನ್ನ ತುಮಕೂರು ನಗರದಲ್ಲಿ ಬಲಿಷ್ಠವಾಗಿ ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜೆಡಿಎಸ್ ಮುಖಂಡ ನರಸೇಗೌಡ ರವರು ಮುಂಬರುವ ಚುನಾವಣೆಯಲ್ಲಿ ಅಟಿಕ ಗೋಲ್ಡ್ ಕಂಪನಿಯ ಮಾಲೀಕ ಬೊಮ್ನಳ್ಳಿ ಬಾಬು ರವರನ್ನು ಬೆಂಬಲಿಸುವುದಾಗಿ ಘೋಷಿಸುವ ಮೂಲಕ ಜೆಡಿಎಸ್ ಪಕ್ಷಕ್ಕೆ ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ ಎಂದರೆ ತಪ್ಪಾಗಲಾರದು.

ಇತ್ತೀಚಿಗೆ ನರ್ಸೇಗೌಡರ ಮನೆಗೆ ಎಚ್ ಡಿ ಕುಮಾರಸ್ವಾಮಿ ರವರು ಸಹ ಭೇಟಿ ನೀಡಿ ನರಸೇಗೌಡರ ಆರೋಗ್ಯ ಕ್ಷೇಮ ವಿಚಾರಿಸಿ ಪಕ್ಷದಲ್ಲೇ ಉಳಿದುಕೊಳ್ಳುವಂತೆ ಹಾಗೂ ತುಮಕೂರು ನಗರ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಬೆಂಬಲಿಸುವಂತೆ ಮನವಿ ಮಾಡಿದ್ದರು.

ಕೊನೆ ಕ್ಷಣದಲ್ಲಿ ಬೊಮ್ಮನಹಳ್ಳಿ ಬಾಬು ರವರಿಗೆ ತಮ್ಮ ಸಹಕಾರ ನೀಡಿ ಮುಂದಿನ ಚುನಾವಣೆಯಲ್ಲಿ ಬಾಬುರವರನ್ನು ತುಮಕೂರು ನಗರ ಶಾಸಕರನ್ನಾಗಿ ಮಾಡುವ ಗುರಿ ಹೊಂದಲಾಗಿದ್ದು ಜೆಡಿಎಸ್ ಪಕ್ಷದಿಂದ ಟಿಕೆಟ್ ತಂದರು ಸಹ ಸಪೋರ್ಟ್ ಮಾಡುವೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ತಂದರು ಸಹ ಬಾಬುರವರಿಗೆ ತಮ್ಮ ಬೆಂಬಲವನ್ನ ನೀಡುವುದಾಗಿ ವಿಡಿಯೋವನ್ನು ಬಿಡುವ ಮೂಲಕ ಜೆಡಿಎಸ್ ಪಕ್ಷಕ್ಕೆ ಬಹುದೊಡ್ಡ ಶಾಕ್ ನೀಡಿದ್ದಾರೆ.

 

ಮಾಜಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನರಸೇಗೌಡರನ್ನ ಇತ್ತೀಚಿಗೆ ನಗರ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ರವರು ಒಲೈ ಸಿಕೊಳ್ಳುವಲ್ಲಿ ಸಂಪೂರ್ಣ ವಿಫಲರಾಗಿದ್ದರು ಎನ್ನುವ ವಿಷಯ ಸಹ ಪಕ್ಷದ ಆಂತರಿಕ ವಲಯದಲ್ಲಿ ಕೇಳಿ ಬರುತ್ತಿತ್ತು.

 

 

ನರಸೆಗೌಡರ ಈ ನಿರ್ಧಾರದಿಂದ ಜೆಡಿಎಸ್ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ನರಸೆಗೌಡರ ನಿರ್ಧಾರದಿಂದ ಜೆಡಿಎಸ್ ಪಕ್ಷಕ್ಕೆ ಬಹುದೊಡ್ಡ ಆಘಾತ ಎದುರಾಗಿದ್ದು ಮುಂದೆ ಯಾವ ರೀತಿ ಬೆಳವಣಿಗೆ ಆಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version