160 ಸೀಟು ಗೆಲ್ಲೋ ರೀತಿ ಮಾತಾಡ್ತಾರೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನಾಯಕರು- ಡಾ. ಜಿ ಪರಮೇಶ್ವರ್.

160 ಸೀಟು ಗೆಲ್ಲೋ ರೀತಿ ಮಾತಾಡ್ತಾರೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನಾಯಕರು- ಡಾ. ಜಿ ಪರಮೇಶ್ವರ್.

 

 

ತುಮಕೂರು _ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ರಾಜ್ಯದಲ್ಲಿ 160 ಗೆಲ್ಲೋ ರೀತಿ ಮಾತಾಡ್ತಾರೆ ಇನ್ನೂ ಜೆಡಿಎಸ್ ಪಕ್ಷದ ವತಿಯಿಂದ ನಡೆಯುತ್ತಿರುವ ಪಂಚ ರತ್ನ ಯಾತ್ರೆಯಲ್ಲಿ ಯಾರಾದರೂ ಯಾವ ರತ್ನವನ್ನಾದರೂ ಕಂಡಿದ್ದೀರಾ ಎಂದು ಜೆಡಿಎಸ್ ಪಕ್ಷದ ನಾಯಕರಿಗೆ ಪ್ರಶ್ನೆ ಮಾಡಿದ್ದಾರೆ.

 

 

 

 

 

ಬುದುವಾರ ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪ್ರಜಾ ಧ್ವನಿ ಕಾರ್ಯಕ್ರಮದ ಸಂಬಂಧ ಪೂರ್ವಭಾವಿ ಸಭೆ ಏರ್ಪಟ್ಟಿದ್ದು ಸಭೆಯಲ್ಲಿ ಮಾತನಾಡುವ ವೇಳೆ ಕೊರಟಗೆರೆ ಕ್ಷೇತ್ರದ ಶಾಸಕ ಡಾಕ್ಟರ್ ಜಿ ಪರಮೇಶ್ವರ್ ಅವರು ಜೆಡಿಎಸ್ ಪಕ್ಷದ ವತಿಯಿಂದ ನಡೆಯುತ್ತಿರುವ ಪಂಚ ರತ್ನ ಯಾತ್ರೆಯ ಬಗ್ಗೆ ಲೇವಡಿ ಮಾಡಿದ್ದಾರೆ.

 

 

 

ಇನ್ನು ಶೀಘ್ರದಲ್ಲೇ ತುಮಕೂರಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರಜಾಧ್ವನಿ ಕಾರ್ಯಕ್ರಮ ನಡೆಸಲಿದ್ದು ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರನ್ನೊಳಗೊಂಡಂತೆ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತಾ ಜೆಡಿಎಸ್ ಪಕ್ಷದ ಪಂಚರತ್ನ ಯಾತ್ರೆ ಹಾಗೂ ಬಿಜೆಪಿ ಪಕ್ಷದ ವಿರುದ್ಧ ಹರಿಹಾಯ್ದರು.

 

 

ಇನ್ನು ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಅವರವರ ಪಕ್ಷದ ಬಗ್ಗೆ ಹೆಚ್ಚಿನ ಪ್ರಚಾರ ಮಾಡುತ್ತಿದ್ದು ಅದರಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ನಾಯಕರು ಸಹ ತಮ್ಮ ಪಕ್ಷದ ಸಿದ್ದಾಂತಗಳು, ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಯಪಡಿಸಬೇಕು ಆ ಮೂಲಕ ಜೆಡಿಎಸ್ ಹಾಗೂ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ಇಡುವ ಕೆಲಸವನ್ನು ಮಾಡಬೇಕು ಎಂದು ಕಾರ್ಯಕರ್ತರಿಗೆ ಕರೆಕೊಟ್ಟರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version