ಕನ್ನಡ ನಾಡು-ನುಡಿಯ ಪ್ರತೀಕ ಕನ್ನಡ ರಾಜ್ಯೋತ್ಸವ- ಶಿವಾನಂದ ಶಿವಾಚಾರ್ಯ ಶ್ರೀ.

ಕನ್ನಡ ನಾಡು-ನುಡಿಯ ಪ್ರತೀಕ ಕನ್ನಡ ರಾಜ್ಯೋತ್ಸವ- ಶಿವಾನಂದ ಶಿವಾಚಾರ್ಯ ಶ್ರೀ.

 

ಕರ್ನಾಟಕ ರಾಜ್ಯಕ್ಕೆ ಕನ್ನಡ ರಾಜ್ಯೋತ್ಸವ ಬಹುದೊಡ್ಡ ಕನ್ನಡದ ಹಬ್ಬ ನವಂಬರ್ ತಿಂಗಳು ರಾಜ್ಯಾದ್ಯಂತ ಕನ್ನಡ ಭಾಷೆ ಸಂಸ್ಕೃತಿಯ ಪ್ರತೀಕವಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ ಕನ್ನಡ ಭಾಷೆ ನಾಡು ನುಡಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತುಮಕೂರಿನ ಹಿರೇಮಠದ ಶಿವಾನಂದ ಶಿವಾಚಾರ್ಯ ಶ್ರೀಗಳು ತಿಳಿಸಿದರು.

 

ತುಮಕೂರಿನ ಗೊಂಚಿ ಚೌಕ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಹಾಗೂ ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಗಳು ಒಬ್ಬ ಉತ್ತಮ ನಟನನ್ನು ಕಳೆದುಕೊಂಡ ಕನ್ನಡ ನಾಡು ಈ ಮೂಲಕ ಸರಳವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸುವ ಮೂಲಕ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಕೆಲಸವನ್ನು ಸಂಘಟನೆಗಳು ಮಾಡುತ್ತಿವೆ ಎಂದರು.

ಇನ್ನು ದಲಿತ ಸಂಘರ್ಷ ಸ್ವಾಭಿಮಾನಿ ವೇದಿಕೆಯ ರಾಜ್ಯಾಧ್ಯಕ್ಷ ಬಂಡೆ ಕುಮಾರ್ ಮಾತನಾಡಿ ಕನ್ನಡ ನಾಡು ನುಡಿ ಪ್ರತೀಕ ಈ ಕನ್ನಡ ರಾಜ್ಯೋತ್ಸವವನ್ನು ರಾಜ್ಯಾದ್ಯಂತ ಸಂಭ್ರಮ ಸಡಗರದಿಂದ ಆಚರಿಸುವ ಮೂಲಕ ಕನ್ನಡ ಮಾತೆಗೆ ಗೌರವ ಸಲ್ಲಿಸಲಾಗುತ್ತದೆ ಎಂದರು.

ಇನ್ನು ಕಾರ್ಯಕ್ರಮದಲ್ಲಿ ಪೌರಕಾರ್ಮಿಕರು ಹಾಗೂ ಬಡವರಿಗೆ ಉಚಿತ ಆಹಾರ ಕಿಟ್ ಗಳನ್ನು ನೀಡಲಾಯಿತು. ಇದೇ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಟಿ.ಎಲ್ ಆನಂದ್, ದಲಿತ ಮುಖಂಡ ಮಹೇಶ್, ಅಂಬೇಡ್ಕರ್ ಸಂಘದ ಕಿರಣ್ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version