ಕನ್ನಮಂಗಲ ಗ್ರಾಪಂನಲ್ಲಿ ಗಾಂಧಿ ಜಯಂತಿ ಆಚರಣೆ

ಕನ್ನಮಂಗಲ ಗ್ರಾಪಂನಲ್ಲಿ ಗಾಂಧಿ ಜಯಂತಿ ಆಚರಣೆ

ದೇವನಹಳ್ಳಿ: ಸ್ವಚ್ಛ ಭಾರತ್ ಮಿಷನ್ ಮತ್ತು ಆಜಾದ್ ಕಿ ಅಮೃತ ಮಹೋತ್ಸವ ಅಭಿಯಾನವನ್ನು ಗ್ರಾಪಂ ಅಧ್ಯಕ್ಷ ಕೆ.ಆರ್.ನಾಗೇಶ್ ಗಾಂಧಿಜೀ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. 

ನಂತರ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಯ ಪ್ರತಿ ಗ್ರಾಮದಲ್ಲಿ ಸ್ವಚ್ಚ ಸುಂದರ ಪರಿಸರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗಿದೆ. ಎಲ್ಲಾ ಸದಸ್ಯರನ್ನು ಒಳಗೊಂಡು ಒಗ್ಗಟ್ಟಿನಿಂದ ಕೆಲಸ ಮಾಡಲಾಗುತ್ತಿದೆ. ಕಸ ಮುಕ್ತ ಗ್ರಾಮ ಪಂಚಾಯಿತಿಯನ್ನಾಗಿಸಲು ಪಣ ತೊಡಲಾಗಿದೆ ಎಂದರು.

ಈವೇಳೆಯಲ್ಲಿ ಗ್ರಾಪಂ ಉಪಾಧ್ಯಕ್ಷೆ ನಿವಿತಾ, ಸರ್ವ ಸದಸ್ಯರು, ಪಿಡಿಒ ಆದರ್ಶ್‌ಕುಮಾರ್, ಕಾರ್ಯದರ್ಶಿ ಚಂದ್ರಪ್ಪ, ಗ್ರಾಪಂ ಸಿಬ್ಬಂದಿ ಇದ್ದರು.

 

ಮಂಜು ಬೂದಿಗೆರೆ

+91 91138 13926

Leave a Reply

Your email address will not be published. Required fields are marked *

You cannot copy content of this page

error: Content is protected !!