ಪುನೀತ್ ರಾಜಕುಮಾರ್ ರವರಿಗೆ  ಪದ್ಮಶ್ರೀ ಪ್ರಶಸ್ತಿ ನೀಡಲು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ.

ಪುನೀತ್ ರಾಜಕುಮಾರ್ ರವರಿಗೆ  ಪದ್ಮಶ್ರೀ ಪ್ರಶಸ್ತಿ ನೀಡಲು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ.

 

ರಾಜ್ಯದ ಅತ್ಯುತ್ತಮ ಯುವ ನಟರಲ್ಲಿ ಒಬ್ಬರ ಪುನೀತ್ ರಾಜಕುಮಾರ್ ಅವರು ಒಬ್ಬ ಅದ್ಭುತ ಕಲಾವಿದ ಇನ್ನು ಅವರ ನಿಧನದಿಂದ ಕನ್ನಡ ನಾಡಿಗೆ ಅತಿದೊಡ್ಡ ಆಘಾತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 

ಇಂದು ತುಮಕೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ಪುನೀತ್ ರಾಜಕುಮಾರ್ ಒಬ್ಬ ಉತ್ತಮ ನಾಯಕ ನಟ ಇನ್ನೂ ಅವರ ನಿಧನ ಕನ್ನಡ ಚಿತ್ರೋದ್ಯಮಕ್ಕೆ ಅತಿ ದೊಡ್ಡ ಆಘಾತವಾಗಿದೆ ಇಂತಹ ಉತ್ತಮ ನಾಯಕ ನಟನಿಗೆ ಕನಿಷ್ಠ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.

 

 

ಇನ್ನು ಅವರ ನಿಧನದಿಂದ ಕರ್ನಾಟಕ ರಾಜ್ಯಾದ್ಯಂತ ಸುಮಾರು 20 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಪುನೀತ್ ರಾಜಕುಮಾರ್ ಅವರ ಅಂತಿಮ ದರ್ಶನ ಪಡೆದಿರುವುದು ಅವರ ಸಾಧನೆಗೆ ಅತಿದೊಡ್ಡ ಸಾಕ್ಷಿ ಇನ್ನಾದರೂ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version