ವೀರಪ್ಪ ಮೊಯಿಲಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

 

ಕೇಂದ್ರ ಸಾಹಿತ್ಯ ಅಕಾಡೆಮಿಯು 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಶುಕ್ರವಾರ ಪ್ರಕಟಿಸಿದ್ದು, ಕನ್ನಡ ಭಾಷೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಲೇಖಕ ವೀರಪ್ಪ ಮೊಯಿಲಿ ಅವರ ‘ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ’ ಮಹಾಕಾವ್ಯ ಆಯ್ಕೆಯಾಗಿದೆ.

ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

 

? ‘ಬಾಲ ಸಾಹಿತ್ಯ ಪುರಸ್ಕಾರ’ಕ್ಕೆ ಹ.ಸ. ಬ್ಯಾಕೋಡ ಅವರ ‘ನಾನೂ ಅಂಬೇಡ್ಕರ್’ ಕಾದಂಬರಿ ಆಯ್ಕೆಯಾಗಿದೆ.

? ಅಕಾಡೆಮಿಯ ‘ಯುವ ಪುರಸ್ಕಾರ’ಕ್ಕೆ ಕೆ.ಎಸ್. ಮಹದೇವಸ್ವಾಮಿ ಭಾಜನಾರಾಗಿದ್ದಾರೆ.

– ಈ ಎರಡೂ ಪುರಸ್ಕಾರಗಳು ತಲಾ ₹50 ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

– ಇಂಗ್ಲಿಷ್, ಹಿಂದಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ಪ್ರಶಸ್ತಿಗೆ ತಲಾ ಒಂದು ಕೃತಿಯನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.

 

ಕೇಂದ್ರ ಸಾಹಿತ್ಯ ಅಕಾಡೆಮಿ

 

– ಸ್ಥಾಪನೆ :-

ಮಾರ್ಚ್ 12, 1954

– ಪ್ರಧಾನ ಕಚೇರಿ :-

ರವೀಂದ್ರ ಭವನ,ದೆಹಲಿ

– ಅಧ್ಯಕ್ಷರು :-

ಡಾ. ಚಂದ್ರಶೇಖರ ಕಂಬಾರ

 

☘ ಮೊದಲ ಪ್ರಶಸ್ತಿ :- 1955 – ಕುವೆಂಪು

ಶ್ರೀ ರಾಮಾಯಣ ದರ್ಶನಂ (ಮಹಾಕಾವ್ಯ)

☘ 2019ರ ಪ್ರಶಸ್ತಿ :- ವಿಜಯಮ್ಮ

ಕುದಿ ಎಸರು (ಆತ್ಮಕಥೆ)

Leave a Reply

Your email address will not be published. Required fields are marked *

You cannot copy content of this page

error: Content is protected !!