ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್.

ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್.

 

 

ಬೆಂಗಳೂರು_ಮುಂಬರುವ 2023ರ ವಿಧಾನಸಭಾ ಚುನಾವಣೆಗೆ ಕನಕಪುರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಲುವಾಗಿ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಅರ್ಜಿ ಸಲ್ಲಿಸಿದ್ದಾರೆ.

 

 

ಇನ್ನು ಅನ್ಯ ಕಾರ್ಯ ನಿಮಿತ್ತ ದೆಹಲಿಗೆ ತೆರಳಿದ್ದ ಅವರು ಅರ್ಜಿ ಸಲ್ಲಿಸಿರಲಿಲ್ಲ ಅವರ ಪರವಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಕನಕಪುರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್ ದೇವ್ ರವರು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ಅರ್ಜಿಯನ್ನ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ.

 

 

ಇನ್ನು ವಿಜಯ್ ದೇವ್ ರವರು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರ ಅರ್ಜಿಯನ್ನ ತಮ್ಮ ಬೆಂಬಲಿಗರೊಂದಿಗೆ ಕೆಪಿಸಿಸಿ ಕಚೇರಿಗೆ ಆಗಮಿಸಿ ಅರ್ಜಿ ಸಲ್ಲಿಸಿದ್ದಾರೆ.

 

 

 

ಇನ್ನು ಇದೇ ಸಂದರ್ಭದಲ್ಲಿ ಕನಕಪುರದ ಸ್ಥಳೀಯ ನಾಯಕರು ಕಾಂಗ್ರೆಸ್ ಮುಖಂಡರು ಸ್ಥಳದಲ್ಲಿ ಹಾಜರಿದ್ದರು.

 

ವರದಿ _ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version