ಆಟೋಗೆ ಕೆಎಸ್ಆರ್ಟಿಸಿ ಬಸ್ ಗುದ್ದಿ ಮಗು ದುರ್ಮರಣ, ಮತ್ತೋರ್ವ ಮಗು ಚಿಂತಾಜನಕ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ.

ಆಟೋಗೆ  ಕೆಎಸ್ಆರ್ಟಿಸಿ ಬಸ್ ಗುದ್ದಿ ಮಗು ದುರ್ಮರಣ, ಮತ್ತೋರ್ವ ಮಗು ಚಿಂತಾಜನಕ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ.

 

 

ತುಮಕೂರು_ ರಸ್ತೆಯಲ್ಲಿ ಸಂಚರಿಸುತ್ತಿದ್ದ ಆಟೋಗೆ ಕೆ ಎಸ್ ಆರ್ ಟಿ ಸಿ ಬಸ್ ಗುದ್ದಿದ ಪರಿಣಾಮ ಮಗುವೊಂದು ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.

 

 

ತುಮಕೂರು ತಾಲ್ಲೂಕು ಹೊಸಳ್ಳಿ ಬಳಿ(ಗೆರೆಹಳ್ಳಿ) ಕೆಎಸ್ಆರ್ಟಿಸಿ ಬಸ್ ಆಟೋಗೆ ಗುದ್ದಿದ ಪರಿಣಾಮ ಆಟೋದಲ್ಲಿ ಸಂಚರಿಸುತ್ತಿದ್ದ ಮಗುವನ್ನು ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದ್ದು ಗಂಭೀರವಾಗಿ ಗಾಯಗೊಂಡ ಮಗುವನ್ನ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ.

 

 

ಇನ್ನು ಆಟೋದಲ್ಲಿದ್ದ ಮತ್ತೋರ್ವ ವ್ಯಕ್ತಿ ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು ಬಸ್ ಗುದ್ದಿದ ಪರಿಣಾಮ ಆಟೋದಲ್ಲಿದ್ದ ಮೂವರು ರಸ್ತೆಗೆ ಬಿದ್ದಿದ್ದು ಗಂಭೀರವಾಗಿ ಗಾಯಗೊಂಡ ಇಬ್ಬರು ಸಹ ರಸ್ತೆಯಲ್ಲಿ ನರಳಾಡುತ್ತಾ ಇದ್ದರು ಸಹ ಸಾರ್ವಜನಿಕರು ಸಹಾಯಕ್ಕೆ ಮುಂದಾಗಿಲ್ಲ ಜೊತೆಗೆ ಸರಿಯಾದ ಸಮಯಕ್ಕೆ ಅಂಬುಲೆನ್ಸ ಸಹ ಬರದೆ ಗಾಯಗೊಂಡ ಗಾಯಾಳುಗಳು ರಸ್ತೆಯಲ್ಲೇ ನರಳಾಡುತ್ತಿದ್ದರು.

 

ಗಂಭೀರವಾಗಿ ಗಾಯಗೊಂಡ ಮಗು ಸ್ಥಳಕ್ಕೆ ಆಂಬುಲೆನ್ಸ್ ಸರಿಯಾದ ಸಮಯಕ್ಕೆ ಬಾರದಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದೆ.ಇನ್ನು ಸ್ಥಳದಲ್ಲಿದ್ದ ಸಾರ್ವಜನಿಕರು ಸಹ ಗಾಯಗೊಂಡ ಗಾಯಾಳುಗಳನ್ನು ಸಹಾಯಕ್ಕೆ ಮುಂದಾಗಲಿಲ್ಲ.

 

ಇದೆ ಸಂದರ್ಭದಲ್ಲಿ ಅದೇ ಮಾರ್ಗವಾಗಿ ಸಂಚರಿಸುತ್ತಿದ್ದ ಪತ್ರಕರ್ತರು ತಮ್ಮ ವಾಹನದಲ್ಲಿ ಗಾಯಾಳುಗಳನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ

 

ವರದಿ_ ಮಾರುತಿ ಪ್ರಸಾದ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!