BREAKING NEWS :  ತುಮಕೂರಿನ ದೇವರಾಯಪಟ್ಟಣದಲ್ಲಿ ಚಿರತೆ ಪ್ರತ್ಯಕ್ಷ’

BREAKING NEWS : 

ತುಮಕೂರಿನ ದೇವರಾಯಪಟ್ಟಣದಲ್ಲಿ ಚಿರತೆ ಪ್ರತ್ಯಕ್ಷ’ :

 

 

ತುಮಕೂರು : ನಗರದ ದೇವರಾಯ ಪಟ್ಟಣದ ಸುತ್ತಮುತ್ತ ಚಿರತೆ ಪ್ರತ್ಯಕ್ಷಗೊಂಡಿದ್ದು, ಸಿಸಿ ಕ್ಯಾಮರಾದಲ್ಲಿ ಚಿರತೆ ಓಡಾಟದ ದೃಶ್ಯಗಳನ್ನು ಕಂಡು ಸ್ಥಳೀಯರ ಜನರು ಭಯಭೀತರಾಗಿದ್ದಾರೆ.

 

 

 

 

ಕಳೆದೊಂದು ತಿಂಗಳಲ್ಲಿ 5 ಬೀದಿನಾಯಿಗಳನ್ನು ಚಿರತೆ ಬಲಿ ಪಡೆದುಕೊಂಡಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಚಿರತೆ ಪ್ರತ್ಯಕ್ಷ ಸುದ್ದಿ ತಿಳಿದು ಸುತ್ತಮುತ್ತಲಿನ ಜನರು ಬೆಚ್ಚಬಿದ್ದಿದ್ದಾರೆ ಮನೆಯಿಂದ ಆಚೆ ಬರೋದಕ್ಕೂ ಹಿಂದೇಟು ಹಾಕುವಂತಾಗಿದೆ ಕೂಡಲೇ ಚಿರತೆ ಸೆರೆ ಹಿಡಿಯೋದಕ್ಕೆ ಗ್ರಾಮಸ್ಥರು ಅರಣ್ಯಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

 

 

 

 

ಚಿರತೆ ಪ್ರತ್ಯಕ್ಷ ಬಗ್ಗೆ ಮಾಹಿತಿ ತಿಳಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಕಂಡುಬಂದಿರುವುದು ಸತ್ಯವಾಗಿದೆ ಇದಕ್ಕೆ ಸಂಬಂಧಿಸಿದಂತೆ ನಮ್ಮ ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿ ಸ್ಥಳದಲ್ಲಿ  ಚಿರತೆ ಹೆಜ್ಜೆ ಗುರುತು ಕಂಡುಬಂದಿದ್ದು ಚಿರತೆ ಸೆರೆಗಾಗಿ ಸ್ಥಳದಲ್ಲಿ ಬೋನ್ ಇಟ್ಟಿರುವುದಾಗಿ ಸ್ಪಷ್ಟಪಡಿಸಿದ್ದಾರೆ ಚಿರತೆ ಕಂಡುಬಂದಿರುವ ದೃಶ್ಯ ಸಿಸಿಟಿವಿಯಲ್ಲಿ ಸರಿಯಾಗಿದೆ. ಎನ್ನುವ ಕೆಲ ವಿಡಿಯೋಗಳು ಹರಿದಾಡುತ್ತಿದ್ದು ಆ ವಿಡಿಯೋಗಳು ಕಂಡುಬಂದಿರುವ ಚಿರತೆಯದಲ್ಲ ಬದಲಾಗಿ ಬೇರೆ ವಿಡಿಯೋಗಳು ಹರಿದಾಡುತ್ತಿವೆ. ಈ ಬಗ್ಗೆ ಸಾರ್ವಜನಿಕರು ಆತಂಕಗೊಳಗಾಗಬಾರದು ಎಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version