ಲಾರಿ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು.

ಲಾರಿ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು.

 

 

 

ತುಮಕೂರು_ ಬೈಕ್ ಸವಾರನಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು ನಗರದಲ್ಲಿ ನಡೆದಿದೆ.

 

 

ಬುಧವಾರ ಬೆಳಗ್ಗೆ ತುಮಕೂರಿನ ಹೆಗ್ಗೆರೆಯ ನಿವಾಸಿ ಮಂಜುನಾಥ ರಾಜ್ ಅರಸ್ (37) ಎನ್ನುವ ವ್ಯಕ್ತಿಗೆ ರಸ್ತೆಯಲ್ಲಿ ಸಾಗುತ್ತಿದ್ದ ಲಾರಿಯೊಂದು ಬೈಕಿಗೆ ಗುದ್ದಿದ ಪರಿಣಾಮ ಬೈಕ್ ಸವಾರ ಲಾರಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಅಸುನೀಗಿದ್ದಾರೆ.

 

 

ಬೈಕ್ ಸವಾರನಿಗೆ ಲಾರಿ ಗುದ್ದಿದ ಪರಿಣಾಮ ಬೈಕ್ ಸವಾರನ ದೇಹ ಸಂಪೂರ್ಣ ಚಿದ್ರವಾಗಿತು. ಇನ್ನು ಮೃತಪಟ್ಟ ಮಂಜುನಾಥ್ ತುಮಕೂರಿನ ಹಿರೇಹಳ್ಳಿಯ ಖಾಸಗಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಕೆಲಸಕ್ಕೆಂದು ತೆರಳುವ ವೇಳೆ ವೇಳೆ ಬುಧವಾರ ಬೆಳಗೆ ಅಪಘಾತ ಸಂಭವಿಸಿದ್ದು ಘಟನೆ ಸಂಬಂಧ ತುಮಕೂರಿನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

 

ವರದಿ- ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version