ಅಪಘಾತ ಸಂಭವಿಸಿದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಉಸ್ತುವಾರಿ ಸಚಿವ ಮಾಧುಸ್ವಾಮಿ. 

ಅಪಘಾತ ಸಂಭವಿಸಿದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಉಸ್ತುವಾರಿ ಸಚಿವ ಮಾಧುಸ್ವಾಮಿ. 

 

ಶಿರಾ – ಅಮರಾಪುರ ರಸ್ತೆಯ ಹುಚ್ಚಗೀರನಹಳ್ಳಿ ಗೇಟ್ ಬಳಿ ಸೋಮವಾರ ಬೈಕುಗಳ ನಡುವೆ ಅಪಘಾತವಾಗಿದ್ದು ಗಾಯಾಳುಗಳು ರಸ್ತೆಯಲ್ಲಿಯೇ ಬಿದ್ದು ನರಳಾಡುತ್ತಿದ್ದರು.

 

ಅದೇ ಸಂದರ್ಭದಲ್ಲಿ ಇದೇ ಮಾರ್ಗವಾಗಿ ಚಿಕ್ಕಬಾಣಗೆರೆ ಗ್ರಾಮದಲ್ಲಿನ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮಾಧುಸ್ವಾಮಿರವರು,  ಸಿರಾ ಶಾಸಕರಾದ ರಾಜೇಶ್ ಗೌಡ, ಹಾಗೂ ವಿಧಾನಪರಿಷತ್ ಶಾಸಕರಾದ ಶ್ರೀ ಚಿದಾನಂದ ಎಂ. ಗೌಡ ರವರು ಕೂಡಲೇ ತಮ್ಮ ವಾಹನ ನಿಲ್ಲಿಸಿ, ಗಾಯಾಳುಗಳನ್ನು ಉಪಚರಿಸಿದರು. ತುರ್ತಾಗಿ ಆಸ್ಪತ್ರೆಗೆ ದಾಖಲಿಸಲು ತಮ್ಮ ಬೆಂಗಾವಲು ವಾಹನದಲ್ಲೇ ಕಳಿಸಿಕೊಟ್ಟು ತಕ್ಷಣ ಚಿಕಿತ್ಸೆ ದೊರಕುವಂತೆ ಮಾಡಿ ಮಾನವೀಯತೆ ಮೆರೆದರು.

 

ಇದೇ ಸಂದರ್ಭದಲ್ಲಿ ಸಮಯಕ್ಕೆ ಸರಿಯಾಗಿ ಆಂಬುಲೆನ್ಸ್ ಸ್ಥಳಕ್ಕೆ ಬಾರದೇ ಇರುವುದನ್ನು ಕಂಡ ಸಚಿವರು ಗರಂ ಆದರು.

 

 

ಅಪಘಾತವಾದ ಸಮಯದಲ್ಲಿ ಗಾಯಾಳುಗಳಿಗೆ ತುರ್ತಾಗಿ ಸ್ಪಂದಿಸುವ ಮೂಲಕ ಗಾಯಾಳುಗಳಿಗೆ ಜನಪ್ರತಿನಿಧಿಗಳು ನೆರವಾಗಿದ್ದಾರೆ ಈ ಕಾರ್ಯವನ್ನು ಕಂಡ ಪ್ರತ್ಯಕ್ಷದರ್ಶಿಗಳು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

 

ವರದಿ _ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!