ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಬಹಳಷ್ಟು ಜನ ಕಾಂಗ್ರೆಸ್ ಸೇರಲಿದ್ದಾರೆ: ಗೃಹಸಚಿವ ಡಾ.ಜಿ.ಪರಮೇಶ್ವರ್

ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಬಹಳಷ್ಟು ಜನ ಕಾಂಗ್ರೆಸ್ ಸೇರಲಿದ್ದಾರೆ: ಗೃಹಸಚಿವ ಡಾ.ಜಿ.ಪರಮೇಶ್ವರ್.

ತುಮಕೂರು -ತುಮಕೂರು ಜಿಲ್ಲೆಯಿಂದ ಬಹಳಷ್ಟು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಶೀಘ್ರದಲ್ಲೇ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಪಕ್ಷಗಳಿಗೆ ಶಾಕ್ ನೀಡಿದ್ದಾರೆ.

 

 

 

 

 

ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನೂತನ ಜನಸಂಪರ್ಕ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದರು.ತುಮಕೂರು ಜಿಲ್ಲೆ ಹಾಗೂ ತುಮಕೂರು, ಬಹಳಷ್ಟು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ, ಆದಷ್ಟು ಬೇಗ ಇದನ್ನು ಬಹಿರಂಗ ಪಡಿಸಲಾಗುವುದು ಎಂದರು.

 

 

 

ಇನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದ್ದ 17 ಮಂದಿ( ಬಾಂಬೆ ಫ್ರೆಂಡ್ಸ್) ಶಾಸಕರು ಪಕ್ಷಕ್ಕೆ ಬರಲಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು ಇನ್ನು ಅದಕ್ಕೆ ಸಂಬಂಧಿಸಿದಂತೆ ಕೆಲ ಪ್ರಕ್ರಿಯೆಗಳು ಸಹ ನಡೆಯುತ್ತಿದ್ದು ಅದರಲ್ಲಿ ಕೆಲ ಶಾಸಕರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬುದಾಗಿ ಪರೋಕ್ಷ ಹೇಳಿಕೆ ನೀಡಿ ಅಚ್ಚರಿ ಉಂಟು ಮಾಡಿದ್ದಾರೆ.

 

 

 

ಇನ್ನು ಕಾಂಗ್ರೆಸ್ ಪಕ್ಷಕ್ಕೆ ತುಮಕೂರು ಜಿಲ್ಲೆಯ ಮುಖಂಡರನ್ನ ಹೊರತುಪಡಿಸಿ ವಿವಿಧ ಜಿಲ್ಲೆಗಳ ಮುಖಂಡರು ಸಹ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಮುಂದಾಗಿದ್ದಾರೆ ಎಂದಿದ್ದಾರೆ.

 

 

 

ಇನ್ನು ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಆಪರೇಷನ್ ಕಾಂಗ್ರೆಸ್ಗೆ ಮುಂದಾಗಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅವರು ಅದರ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ

Leave a Reply

Your email address will not be published. Required fields are marked *

You cannot copy content of this page

error: Content is protected !!