ಮುಖ್ಯಮಂತ್ರಿಗಳ ವಿರುದ್ಧ ಬಿಜೆಪಿ ವರಿಷ್ಠರಿಗೆ ಪತ್ರ ಬರೆದಿದ್ದು , ಇದೀಗ ತಾಯಿ ಚಾಮುಂಡೇಶ್ವರಿಯ ಮೊರೆ ಹೋದ ಕೆ ಎಸ್ ಈಶ್ವರಪ್ಪ .

 

ಗ್ರಾಮೀಣಾಭಿವೃದ್ಧಿ ಇಲಾಖೆ ಅನುದಾನ ಬಿಡುಗಡೆ ವಿವಾದ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖಾ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮುಖ್ಯಮಂತ್ರಿಗಳ ವಿರುದ್ಧ ಬಿಜೆಪಿ ವರಿಷ್ಠರಿಗೆ ಪತ್ರ ಬರೆದಿದ್ದು , ಇದೀಗ ತಾಯಿ ಚಾಮುಂಡೇಶ್ವರಿಯ ಮೊರೆ ಹೋಗಿದ್ದಾರೆ .

 

ಶುಕ್ರವಾರ ಕುಟುಂಬ ಸಮೇತ ಚಾಮುಂಡೇಶ್ವರಿ ಸನ್ನಿಧಿಗೆ ಭೇಟಿ ನೀಡಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ .

 

ಅನುದಾನ ಬಿಡುಗಡೆ ವಿವಾದ ಸಂಬಂಧಿಸಿದಂತೆ ಕೆ.ಎಸ್.ಈಶ್ವರಪ್ಪ ವಿರುದ್ಧ ಸಹಿ ಸಂಗ್ರಹ ಹಿನ್ನೆಲೆಯಲ್ಲಿ ಕೆ.ಎಸ್.ಈಶ್ವರಪ್ಪಗೆ ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿ ಶುರುವಾಗಿದೆ .

 

ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ದ ರಾಜ್ಯಪಾಲರಿಗೆ ದೂರು ನೀಡಿರುವ ಈಶ್ವರಪ್ಪ ನಡೆಗೆ ಮುಖ್ಯಮಂತ್ರಿಗಳ ಆಪ್ತ ಸಚಿವ , ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು , ಈಶ್ವರಪ್ಪ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಸಹಿ ಸಂಗ್ರಹ ಮಾಡಿದ್ದಾರೆ ಎನ್ನಲಾಗಿದೆ .

 

ರಾಜ್ಯಪಾಲರಿಗೆ ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಲು ಮತ್ತೆ ನಿರಾಕರಿಸಿದ ಸಚಿವರು ಚಾಮುಂಡೇಶ್ವರಿ ಸನ್ನಿಧಿಗೆ ಕುಟುಂಬ ಸಮೇತ ಭೇಟಿ ನೀಡಿ ಪೂಜೆ ಸಲ್ಲಿಸಿ ತೆರಳಿದರು .

 

ರಾಜ್ಯರಾಜಕಾರಣದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು . ಸಿಎಂ ಪುತ್ರ ವಿಜಯೇಂದ್ರ ಟ್ವೀಟ್ ಬಗ್ಗೆ ಎಲ್ಲ ಬೆಳವಣಿಗೆಗಳ ಬಗ್ಗೆ ಮದ್ಯಾಹ್ನ ಪ್ರತಿಕ್ರಿಯೆ ನೀಡುತ್ತೇನೆ ಎಂದು ತೆರಳಿದರು .

 

ಚಾಮುಂಡೇಶ್ವರಿ ಸನ್ನಿಧಿಗೆ ಈಶ್ವರಪ್ಪನವರು ಪತ್ನಿ , ಪುತ್ರ ಸೊಸೆ ಮೊಮ್ಮಕ್ಕಳೊಂದಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು..

Leave a Reply

Your email address will not be published. Required fields are marked *

You cannot copy content of this page

error: Content is protected !!